Advertisement
ಸುದ್ದಿಗಳು

ನೆಲ್ಯಾಡಿ- ಕೊಕ್ಕಡ ರಸ್ತೆ ಅವ್ಯವಸ್ಥೆ | ದುರಸ್ತಿ ಯಾವಾಗ ಎಂದು ಕೇಳುತ್ತಾರೆ ಗ್ರಾಮದ ಜನ |

Share

ಕಡಬ ತಾಲೂಕಿನ ನೆಲ್ಯಾಡಿಯಿಂದ ಕೊಕ್ಕಡ ವನ್ನು ಸಂಪರ್ಕಿಸುವ ನೆಲ್ಯಾಡಿ ಪುತ್ಯೆ‌ ರಸ್ತೆಯ ಕೇವಲ ಅರ್ಧ ಕಿಲೋ ಮೀಟರ್ ರಸ್ತೆ ಜನಸಂಚಾರಕ್ಕೆ ಅಯೋಗ್ಯವಾದ ರಸ್ತೆಯಾಗಿ ಮಾರ್ಪಟ್ಟಿದೆ.

ಪ್ರಸ್ತುತ ದಿನಗಳಲ್ಲಿ ನೆಲ್ಯಾಡಿಯು ವ್ಯಾಪಾರ, ಕೃಷಿ ಚಟುವಟಿಕೆ, ಶಾಲಾ-ಕಾಲೇಜು ಹೀಗೆ ನಾನಾ ವಿಷಯದಲ್ಲಿ ಬೆಳೆದುನಿಂತ ಮುಖ್ಯ ಪೇಟೆಯಾಗಿದೆ. ಹೀಗಾಗಿ ಕೊಕ್ಕಡ , ಪುತ್ಯೆ, ಹಾರ ಪ್ರದೇಶದ ಜನರು ನೆಲ್ಯಾಡಿಯನ್ನು ಹೆಚ್ಚಿನ ವಹಿವಾಟುಗಳಿಗಾಗಿ ದಿನನಿತ್ಯ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಇಲ್ಲಿನ ಜನರು ಇದೇ ಪುತ್ಯೆ ಮಾರ್ಗವನ್ನು‌ ಬಳಸಿಕೊಂಡು ನೆಲ್ಯಾಡಿಗೆ ಹೋಗಬೇಕಾಗಿದೆ. ಆದರೆ ಸಂಚಾರಕ್ಕೆ ಮಾತ್ರಾ ಅಯೋಗ್ಯವಾಗಿದೆ.

ಈ ಭಾಗದ ರಸ್ತೆಯ ಮಧ್ಯದಲ್ಲಿ ಒಂದು ಸೇತುವೆ ಇದ್ದು, ಸೇತುವೆಯ ಒಂದು ಭಾಗ ಕಡಬ ತಾಲೂಕಿಗೆ ಸೇರಿದರೆ ಸೇತುವೆಯ ಇನ್ನೊಂದು ಭಾಗದ ರಸ್ತೆಯು ಬೆಳ್ತಂಗಡಿ ತಾಲೂಕಿಗೆ ಸೇರಿದೆ. ಪ್ರಸ್ತುತ ಈ ರಸ್ತೆಯು ಜಿಲ್ಲಾ ಪಂಚಾಯತ್ ರಸ್ತೆಯಿಂದ ಕಳೆದ ಐದು ತಿಂಗಳ ಹಿಂದೆಯೇ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದೆ. ಹಾಗೂ ಈ ರಸ್ತೆಯ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆ ನೋಡಿಕೊಳ್ಳುತ್ತಿದೆ.

ಕರ್ನಾಟಕ ಕೇರಳದ ಗಡಿಭಾಗವಾದ ಸುಳ್ಯ ಸಮೀಪದ ಪೈಚಾರಿನಿಂದ ಆರಂಭಗೊಳ್ಳುವ ಈ ರಸ್ತೆಯು ಬೆಳ್ಳಾರೆ – ಸವಣೂರು- ಆಲಂಗಾರು – ನೆಲ್ಯಾಡಿ- ಕೊಕ್ಕಡ- ಪಟ್ರಮೆ -ಧರ್ಮಸ್ಥಳ – ಉಜಿರೆ- ಮುಂಡಾಜೆ ಮೂಲಕ ದಿಡುಪೆ ಸೇರಲಿದೆ. ರಸ್ತೆಯು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಕಾರಣ ಇಲ್ಲಿನ ಸ್ಥಳೀಯ ಆಡಳಿತಗಳು ಕೂಡ ಈ ರಸ್ತೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯನ್ನು ಪ್ರಶ್ನಿಸಿದರೆ ನಮಗೆ ಸರಕಾರದಿಂದ ಅನುದಾನ ದೊರೆತಿಲ್ಲ ಹಾಗಾಗಿ ಕಾಮಗಾರಿಯನ್ನು ಆರಂಭಿಸಲು ಆಗುವುದಿಲ್ಲ ಎನ್ನುತ್ತಾರೆ.

ಸರ್ಕಾರ, ಆಡಳಿತ ಎಲ್ಲವೂ ಇದ್ದರೂ ಇಚ್ಛಾಶಕ್ತಿ ಮಾತ್ರ ನಿಮ್ಮಲ್ಲಿಲ್ಲ. ಚುನಾವಣೆ ಹತ್ತಿರ ಬಂದಾಗ ಮತಪ್ರಚಾರಕ್ಕಾಗಿ ಬರುವ ಜನಪ್ರತಿನಿಧಿಗಳು ಈಗೊಂದು ಬಾರಿ ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಇಲ್ಲಿನ ಜನರ ಕಷ್ಟ ಅರ್ಥ ಆದೀತು ಅನ್ನುವುದು ಇಲ್ಲಿನ ಜನರ ವಿಷಾದ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಮರ್ಥ ಸಮನ್ಯು

ಸಮರ್ಥ ಸಮನ್ಯು , - ಬರಹಗಾರರು, ವಿಮರ್ಶಕರು.

Published by
ಸಮರ್ಥ ಸಮನ್ಯು

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

3 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

3 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

3 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

8 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago