Advertisement
ಸುದ್ದಿಗಳು

ನೆಲ್ಯಾಡಿ- ಕೊಕ್ಕಡ ರಸ್ತೆ ಅವ್ಯವಸ್ಥೆ | ದುರಸ್ತಿ ಯಾವಾಗ ಎಂದು ಕೇಳುತ್ತಾರೆ ಗ್ರಾಮದ ಜನ |

Share

ಕಡಬ ತಾಲೂಕಿನ ನೆಲ್ಯಾಡಿಯಿಂದ ಕೊಕ್ಕಡ ವನ್ನು ಸಂಪರ್ಕಿಸುವ ನೆಲ್ಯಾಡಿ ಪುತ್ಯೆ‌ ರಸ್ತೆಯ ಕೇವಲ ಅರ್ಧ ಕಿಲೋ ಮೀಟರ್ ರಸ್ತೆ ಜನಸಂಚಾರಕ್ಕೆ ಅಯೋಗ್ಯವಾದ ರಸ್ತೆಯಾಗಿ ಮಾರ್ಪಟ್ಟಿದೆ.

ಪ್ರಸ್ತುತ ದಿನಗಳಲ್ಲಿ ನೆಲ್ಯಾಡಿಯು ವ್ಯಾಪಾರ, ಕೃಷಿ ಚಟುವಟಿಕೆ, ಶಾಲಾ-ಕಾಲೇಜು ಹೀಗೆ ನಾನಾ ವಿಷಯದಲ್ಲಿ ಬೆಳೆದುನಿಂತ ಮುಖ್ಯ ಪೇಟೆಯಾಗಿದೆ. ಹೀಗಾಗಿ ಕೊಕ್ಕಡ , ಪುತ್ಯೆ, ಹಾರ ಪ್ರದೇಶದ ಜನರು ನೆಲ್ಯಾಡಿಯನ್ನು ಹೆಚ್ಚಿನ ವಹಿವಾಟುಗಳಿಗಾಗಿ ದಿನನಿತ್ಯ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಇಲ್ಲಿನ ಜನರು ಇದೇ ಪುತ್ಯೆ ಮಾರ್ಗವನ್ನು‌ ಬಳಸಿಕೊಂಡು ನೆಲ್ಯಾಡಿಗೆ ಹೋಗಬೇಕಾಗಿದೆ. ಆದರೆ ಸಂಚಾರಕ್ಕೆ ಮಾತ್ರಾ ಅಯೋಗ್ಯವಾಗಿದೆ.

ಈ ಭಾಗದ ರಸ್ತೆಯ ಮಧ್ಯದಲ್ಲಿ ಒಂದು ಸೇತುವೆ ಇದ್ದು, ಸೇತುವೆಯ ಒಂದು ಭಾಗ ಕಡಬ ತಾಲೂಕಿಗೆ ಸೇರಿದರೆ ಸೇತುವೆಯ ಇನ್ನೊಂದು ಭಾಗದ ರಸ್ತೆಯು ಬೆಳ್ತಂಗಡಿ ತಾಲೂಕಿಗೆ ಸೇರಿದೆ. ಪ್ರಸ್ತುತ ಈ ರಸ್ತೆಯು ಜಿಲ್ಲಾ ಪಂಚಾಯತ್ ರಸ್ತೆಯಿಂದ ಕಳೆದ ಐದು ತಿಂಗಳ ಹಿಂದೆಯೇ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದೆ. ಹಾಗೂ ಈ ರಸ್ತೆಯ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆ ನೋಡಿಕೊಳ್ಳುತ್ತಿದೆ.

ಕರ್ನಾಟಕ ಕೇರಳದ ಗಡಿಭಾಗವಾದ ಸುಳ್ಯ ಸಮೀಪದ ಪೈಚಾರಿನಿಂದ ಆರಂಭಗೊಳ್ಳುವ ಈ ರಸ್ತೆಯು ಬೆಳ್ಳಾರೆ – ಸವಣೂರು- ಆಲಂಗಾರು – ನೆಲ್ಯಾಡಿ- ಕೊಕ್ಕಡ- ಪಟ್ರಮೆ -ಧರ್ಮಸ್ಥಳ – ಉಜಿರೆ- ಮುಂಡಾಜೆ ಮೂಲಕ ದಿಡುಪೆ ಸೇರಲಿದೆ. ರಸ್ತೆಯು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಕಾರಣ ಇಲ್ಲಿನ ಸ್ಥಳೀಯ ಆಡಳಿತಗಳು ಕೂಡ ಈ ರಸ್ತೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯನ್ನು ಪ್ರಶ್ನಿಸಿದರೆ ನಮಗೆ ಸರಕಾರದಿಂದ ಅನುದಾನ ದೊರೆತಿಲ್ಲ ಹಾಗಾಗಿ ಕಾಮಗಾರಿಯನ್ನು ಆರಂಭಿಸಲು ಆಗುವುದಿಲ್ಲ ಎನ್ನುತ್ತಾರೆ.

ಸರ್ಕಾರ, ಆಡಳಿತ ಎಲ್ಲವೂ ಇದ್ದರೂ ಇಚ್ಛಾಶಕ್ತಿ ಮಾತ್ರ ನಿಮ್ಮಲ್ಲಿಲ್ಲ. ಚುನಾವಣೆ ಹತ್ತಿರ ಬಂದಾಗ ಮತಪ್ರಚಾರಕ್ಕಾಗಿ ಬರುವ ಜನಪ್ರತಿನಿಧಿಗಳು ಈಗೊಂದು ಬಾರಿ ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಇಲ್ಲಿನ ಜನರ ಕಷ್ಟ ಅರ್ಥ ಆದೀತು ಅನ್ನುವುದು ಇಲ್ಲಿನ ಜನರ ವಿಷಾದ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಮರ್ಥ ಸಮನ್ಯು

ಸಮರ್ಥ ಸಮನ್ಯು , - ಬರಹಗಾರರು, ವಿಮರ್ಶಕರು.

Published by
ಸಮರ್ಥ ಸಮನ್ಯು

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

7 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

18 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

18 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

18 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago