Advertisement
ಸುದ್ದಿಗಳು

ನೆಲ್ಯಾಡಿ- ಕೊಕ್ಕಡ ರಸ್ತೆ ಅವ್ಯವಸ್ಥೆ | ದುರಸ್ತಿ ಯಾವಾಗ ಎಂದು ಕೇಳುತ್ತಾರೆ ಗ್ರಾಮದ ಜನ |

Share

ಕಡಬ ತಾಲೂಕಿನ ನೆಲ್ಯಾಡಿಯಿಂದ ಕೊಕ್ಕಡ ವನ್ನು ಸಂಪರ್ಕಿಸುವ ನೆಲ್ಯಾಡಿ ಪುತ್ಯೆ‌ ರಸ್ತೆಯ ಕೇವಲ ಅರ್ಧ ಕಿಲೋ ಮೀಟರ್ ರಸ್ತೆ ಜನಸಂಚಾರಕ್ಕೆ ಅಯೋಗ್ಯವಾದ ರಸ್ತೆಯಾಗಿ ಮಾರ್ಪಟ್ಟಿದೆ.

ಪ್ರಸ್ತುತ ದಿನಗಳಲ್ಲಿ ನೆಲ್ಯಾಡಿಯು ವ್ಯಾಪಾರ, ಕೃಷಿ ಚಟುವಟಿಕೆ, ಶಾಲಾ-ಕಾಲೇಜು ಹೀಗೆ ನಾನಾ ವಿಷಯದಲ್ಲಿ ಬೆಳೆದುನಿಂತ ಮುಖ್ಯ ಪೇಟೆಯಾಗಿದೆ. ಹೀಗಾಗಿ ಕೊಕ್ಕಡ , ಪುತ್ಯೆ, ಹಾರ ಪ್ರದೇಶದ ಜನರು ನೆಲ್ಯಾಡಿಯನ್ನು ಹೆಚ್ಚಿನ ವಹಿವಾಟುಗಳಿಗಾಗಿ ದಿನನಿತ್ಯ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಇಲ್ಲಿನ ಜನರು ಇದೇ ಪುತ್ಯೆ ಮಾರ್ಗವನ್ನು‌ ಬಳಸಿಕೊಂಡು ನೆಲ್ಯಾಡಿಗೆ ಹೋಗಬೇಕಾಗಿದೆ. ಆದರೆ ಸಂಚಾರಕ್ಕೆ ಮಾತ್ರಾ ಅಯೋಗ್ಯವಾಗಿದೆ.

ಈ ಭಾಗದ ರಸ್ತೆಯ ಮಧ್ಯದಲ್ಲಿ ಒಂದು ಸೇತುವೆ ಇದ್ದು, ಸೇತುವೆಯ ಒಂದು ಭಾಗ ಕಡಬ ತಾಲೂಕಿಗೆ ಸೇರಿದರೆ ಸೇತುವೆಯ ಇನ್ನೊಂದು ಭಾಗದ ರಸ್ತೆಯು ಬೆಳ್ತಂಗಡಿ ತಾಲೂಕಿಗೆ ಸೇರಿದೆ. ಪ್ರಸ್ತುತ ಈ ರಸ್ತೆಯು ಜಿಲ್ಲಾ ಪಂಚಾಯತ್ ರಸ್ತೆಯಿಂದ ಕಳೆದ ಐದು ತಿಂಗಳ ಹಿಂದೆಯೇ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದೆ. ಹಾಗೂ ಈ ರಸ್ತೆಯ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆ ನೋಡಿಕೊಳ್ಳುತ್ತಿದೆ.

ಕರ್ನಾಟಕ ಕೇರಳದ ಗಡಿಭಾಗವಾದ ಸುಳ್ಯ ಸಮೀಪದ ಪೈಚಾರಿನಿಂದ ಆರಂಭಗೊಳ್ಳುವ ಈ ರಸ್ತೆಯು ಬೆಳ್ಳಾರೆ – ಸವಣೂರು- ಆಲಂಗಾರು – ನೆಲ್ಯಾಡಿ- ಕೊಕ್ಕಡ- ಪಟ್ರಮೆ -ಧರ್ಮಸ್ಥಳ – ಉಜಿರೆ- ಮುಂಡಾಜೆ ಮೂಲಕ ದಿಡುಪೆ ಸೇರಲಿದೆ. ರಸ್ತೆಯು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಕಾರಣ ಇಲ್ಲಿನ ಸ್ಥಳೀಯ ಆಡಳಿತಗಳು ಕೂಡ ಈ ರಸ್ತೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯನ್ನು ಪ್ರಶ್ನಿಸಿದರೆ ನಮಗೆ ಸರಕಾರದಿಂದ ಅನುದಾನ ದೊರೆತಿಲ್ಲ ಹಾಗಾಗಿ ಕಾಮಗಾರಿಯನ್ನು ಆರಂಭಿಸಲು ಆಗುವುದಿಲ್ಲ ಎನ್ನುತ್ತಾರೆ.

ಸರ್ಕಾರ, ಆಡಳಿತ ಎಲ್ಲವೂ ಇದ್ದರೂ ಇಚ್ಛಾಶಕ್ತಿ ಮಾತ್ರ ನಿಮ್ಮಲ್ಲಿಲ್ಲ. ಚುನಾವಣೆ ಹತ್ತಿರ ಬಂದಾಗ ಮತಪ್ರಚಾರಕ್ಕಾಗಿ ಬರುವ ಜನಪ್ರತಿನಿಧಿಗಳು ಈಗೊಂದು ಬಾರಿ ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಇಲ್ಲಿನ ಜನರ ಕಷ್ಟ ಅರ್ಥ ಆದೀತು ಅನ್ನುವುದು ಇಲ್ಲಿನ ಜನರ ವಿಷಾದ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಮರ್ಥ ಸಮನ್ಯು

ಸಮರ್ಥ ಸಮನ್ಯು , - ಬರಹಗಾರರು, ವಿಮರ್ಶಕರು.

Published by
ಸಮರ್ಥ ಸಮನ್ಯು

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

47 minutes ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 hour ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

9 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

14 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

15 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago