Advertisement
ಸುದ್ದಿಗಳು

ನೆಲ್ಯಾಡಿ- ಕೊಕ್ಕಡ ರಸ್ತೆ ಅವ್ಯವಸ್ಥೆ | ದುರಸ್ತಿ ಯಾವಾಗ ಎಂದು ಕೇಳುತ್ತಾರೆ ಗ್ರಾಮದ ಜನ |

Share

ಕಡಬ ತಾಲೂಕಿನ ನೆಲ್ಯಾಡಿಯಿಂದ ಕೊಕ್ಕಡ ವನ್ನು ಸಂಪರ್ಕಿಸುವ ನೆಲ್ಯಾಡಿ ಪುತ್ಯೆ‌ ರಸ್ತೆಯ ಕೇವಲ ಅರ್ಧ ಕಿಲೋ ಮೀಟರ್ ರಸ್ತೆ ಜನಸಂಚಾರಕ್ಕೆ ಅಯೋಗ್ಯವಾದ ರಸ್ತೆಯಾಗಿ ಮಾರ್ಪಟ್ಟಿದೆ.

ಪ್ರಸ್ತುತ ದಿನಗಳಲ್ಲಿ ನೆಲ್ಯಾಡಿಯು ವ್ಯಾಪಾರ, ಕೃಷಿ ಚಟುವಟಿಕೆ, ಶಾಲಾ-ಕಾಲೇಜು ಹೀಗೆ ನಾನಾ ವಿಷಯದಲ್ಲಿ ಬೆಳೆದುನಿಂತ ಮುಖ್ಯ ಪೇಟೆಯಾಗಿದೆ. ಹೀಗಾಗಿ ಕೊಕ್ಕಡ , ಪುತ್ಯೆ, ಹಾರ ಪ್ರದೇಶದ ಜನರು ನೆಲ್ಯಾಡಿಯನ್ನು ಹೆಚ್ಚಿನ ವಹಿವಾಟುಗಳಿಗಾಗಿ ದಿನನಿತ್ಯ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಇಲ್ಲಿನ ಜನರು ಇದೇ ಪುತ್ಯೆ ಮಾರ್ಗವನ್ನು‌ ಬಳಸಿಕೊಂಡು ನೆಲ್ಯಾಡಿಗೆ ಹೋಗಬೇಕಾಗಿದೆ. ಆದರೆ ಸಂಚಾರಕ್ಕೆ ಮಾತ್ರಾ ಅಯೋಗ್ಯವಾಗಿದೆ.

ಈ ಭಾಗದ ರಸ್ತೆಯ ಮಧ್ಯದಲ್ಲಿ ಒಂದು ಸೇತುವೆ ಇದ್ದು, ಸೇತುವೆಯ ಒಂದು ಭಾಗ ಕಡಬ ತಾಲೂಕಿಗೆ ಸೇರಿದರೆ ಸೇತುವೆಯ ಇನ್ನೊಂದು ಭಾಗದ ರಸ್ತೆಯು ಬೆಳ್ತಂಗಡಿ ತಾಲೂಕಿಗೆ ಸೇರಿದೆ. ಪ್ರಸ್ತುತ ಈ ರಸ್ತೆಯು ಜಿಲ್ಲಾ ಪಂಚಾಯತ್ ರಸ್ತೆಯಿಂದ ಕಳೆದ ಐದು ತಿಂಗಳ ಹಿಂದೆಯೇ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದೆ. ಹಾಗೂ ಈ ರಸ್ತೆಯ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆ ನೋಡಿಕೊಳ್ಳುತ್ತಿದೆ.

ಕರ್ನಾಟಕ ಕೇರಳದ ಗಡಿಭಾಗವಾದ ಸುಳ್ಯ ಸಮೀಪದ ಪೈಚಾರಿನಿಂದ ಆರಂಭಗೊಳ್ಳುವ ಈ ರಸ್ತೆಯು ಬೆಳ್ಳಾರೆ – ಸವಣೂರು- ಆಲಂಗಾರು – ನೆಲ್ಯಾಡಿ- ಕೊಕ್ಕಡ- ಪಟ್ರಮೆ -ಧರ್ಮಸ್ಥಳ – ಉಜಿರೆ- ಮುಂಡಾಜೆ ಮೂಲಕ ದಿಡುಪೆ ಸೇರಲಿದೆ. ರಸ್ತೆಯು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಕಾರಣ ಇಲ್ಲಿನ ಸ್ಥಳೀಯ ಆಡಳಿತಗಳು ಕೂಡ ಈ ರಸ್ತೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯನ್ನು ಪ್ರಶ್ನಿಸಿದರೆ ನಮಗೆ ಸರಕಾರದಿಂದ ಅನುದಾನ ದೊರೆತಿಲ್ಲ ಹಾಗಾಗಿ ಕಾಮಗಾರಿಯನ್ನು ಆರಂಭಿಸಲು ಆಗುವುದಿಲ್ಲ ಎನ್ನುತ್ತಾರೆ.

ಸರ್ಕಾರ, ಆಡಳಿತ ಎಲ್ಲವೂ ಇದ್ದರೂ ಇಚ್ಛಾಶಕ್ತಿ ಮಾತ್ರ ನಿಮ್ಮಲ್ಲಿಲ್ಲ. ಚುನಾವಣೆ ಹತ್ತಿರ ಬಂದಾಗ ಮತಪ್ರಚಾರಕ್ಕಾಗಿ ಬರುವ ಜನಪ್ರತಿನಿಧಿಗಳು ಈಗೊಂದು ಬಾರಿ ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಇಲ್ಲಿನ ಜನರ ಕಷ್ಟ ಅರ್ಥ ಆದೀತು ಅನ್ನುವುದು ಇಲ್ಲಿನ ಜನರ ವಿಷಾದ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಮರ್ಥ ಸಮನ್ಯು

ಸಮರ್ಥ ಸಮನ್ಯು , - ಬರಹಗಾರರು, ವಿಮರ್ಶಕರು.

Published by
ಸಮರ್ಥ ಸಮನ್ಯು

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

10 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago