ಸುದ್ದಿಗಳು

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ  ಸಮಿತಿ ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್‌ಗಳು ಕ್ರಮ ವಹಿಸಬೇಕು. ಪ್ರತಿ ತಿಂಗಳು ಗುರಿ ನಿಗದಿಪಡಿಸಿ ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.ಮತ್ತೆ ಕೆರೆಗಳ ಒತ್ತುವರಿಯಾದರೆ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2520 ಕೆರೆಗಳಿದ್ದು, ಒತ್ತುವರಿ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇವೆ. ಜಿಲ್ಲಾ ವ್ಯಾಪ್ತಿಯಲ್ಲಿ ಕೆರೆಗಳ ತೆರವು ಮಾಡಿರುವ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕಿದ್ದು, ತೆರವು ಕಾರ್ಯಾಚರಣೆ ತ್ವರಿತವಾಗಿ ನಡೆಯಬೇಕು ಎಂದು ಸೂಚನೆ ನೀಡಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

5 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

5 hours ago

ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?

ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…

5 hours ago

ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ

ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು,  ಪ್ರಸಕ್ತ ಜಲಾಶಯದಲ್ಲಿ 77.144…

6 hours ago

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…

7 hours ago

ಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ

ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ…

7 hours ago