ಕೋಲಾರ ಜಿಲ್ಲೆಯ ಖಾಸಗಿ ಹಾಲು ಉತ್ಪಾದನೆ ಹಾಗೂ ಮಾರಾಟ ಕೇಂದ್ರಗಳಲ್ಲಿ ಕಲಬೆರಕೆ ಹಾಲು ಮಾರಾಟ ನಡೆಯುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬುಧವಾರ ಬೆಳಗಿನ ಜಾವ ಸಂಯುಕ್ತ ಕಾರ್ಯಾಚರಣೆ ನಡೆಸಿದೆ.
ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರ ನೇತೃತ್ವದಲ್ಲಿ ಆಹಾರ ಸುರಕ್ಷತಾ ಇಲಾಖೆಯ 30 ವಿಶೇಷ ತಂಡಗಳು ಜಿಲ್ಲಾದ್ಯಂತ ವಿವಿಧ ಹಾಲು ಕೇಂದ್ರಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದವು. ಕಾರ್ಯಾಚರಣೆಗೆ ಮುನ್ನ ಸಂಪೂರ್ಣ ರಹಸ್ಯವಾಗಿ ನೀಲನಕ್ಷೆ ಸಿದ್ಧಪಡಿಸಲಾಗಿತ್ತು.
ಅನಿರೀಕ್ಷಿತ ತಪಾಸಣೆ ವೇಳೆ ಯಾವುದೇ ದಾಖಲೆಗಳಿಲ್ಲದ ಹಾಗೂ ಸಂಶಯಾಸ್ಪದವಾಗಿದ್ದ ಒಟ್ಟು 40 ಹಾಲಿನ ಮಾದರಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಾದರಿಗಳನ್ನು ತಕ್ಷಣವೇ ಬೆಂಗಳೂರು ರಾಜ್ಯ ಆಹಾರ ಪ್ರಯೋಗಾಲಯಕ್ಕೆ ವೈಜ್ಞಾನಿಕ ವಿಶ್ಲೇಷಣೆಗೆ ಕಳುಹಿಸಲಾಗಿದೆ.
ಇದಕ್ಕೆ ಜೊತೆಗೆ, ಮುಳಬಾಗಿಲು ತಾಲ್ಲೂಕಿನ ಸಿ. ಕೊರವನೂರು ಗ್ರಾಮದಲ್ಲಿ ಅಕ್ರಮವಾಗಿ ಹಾಲು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ತಪಾಸಣೆ ನಡೆಸಿದ ಅಧಿಕಾರಿಗಳು, 28 ಕ್ಯಾನ್ಗಳಲ್ಲಿ ತುಂಬಿದ್ದ ಸುಮಾರು 1,120 ಲೀಟರ್ ಹಾಲನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಾಥಮಿಕ ತನಿಖೆಯಲ್ಲಿ ಈ ಹಾಲು ಯಾವುದೇ ಮಾನ್ಯತೆ ಅಥವಾ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದ್ದು, ಪರೀಕ್ಷಾ ವರದಿಗಳ ಆಧಾರದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಕಾರ್ಯಾಚರಣೆ ಸಾರ್ವಜನಿಕ ಆರೋಗ್ಯ ರಕ್ಷಣೆ ಹಾಗೂ ಕಲಬೆರಕೆ ಆಹಾರ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನಡೆಸಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಇದನ್ನೂ ಓದಿ…
ಓದುಗರ ಅಭಿಪ್ರಾಯಕ್ಕೆ….
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…
ದೇಶದ ವಿವಿದೆಡೆ ಮಾರ್ಚ್ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್ನಲ್ಲಿ ಅಸಾಮಾನ್ಯ ಹವಾಮಾನದಿಂದ…
ಹೋರ್ಮುಜ್ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…