ಕೋಲಾರ ಜಿಲ್ಲೆಯ ಖಾಸಗಿ ಹಾಲು ಉತ್ಪಾದನೆ ಹಾಗೂ ಮಾರಾಟ ಕೇಂದ್ರಗಳಲ್ಲಿ ಕಲಬೆರಕೆ ಹಾಲು ಮಾರಾಟ ನಡೆಯುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬುಧವಾರ ಬೆಳಗಿನ ಜಾವ ಸಂಯುಕ್ತ ಕಾರ್ಯಾಚರಣೆ ನಡೆಸಿದೆ.
ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರ ನೇತೃತ್ವದಲ್ಲಿ ಆಹಾರ ಸುರಕ್ಷತಾ ಇಲಾಖೆಯ 30 ವಿಶೇಷ ತಂಡಗಳು ಜಿಲ್ಲಾದ್ಯಂತ ವಿವಿಧ ಹಾಲು ಕೇಂದ್ರಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದವು. ಕಾರ್ಯಾಚರಣೆಗೆ ಮುನ್ನ ಸಂಪೂರ್ಣ ರಹಸ್ಯವಾಗಿ ನೀಲನಕ್ಷೆ ಸಿದ್ಧಪಡಿಸಲಾಗಿತ್ತು.
ಅನಿರೀಕ್ಷಿತ ತಪಾಸಣೆ ವೇಳೆ ಯಾವುದೇ ದಾಖಲೆಗಳಿಲ್ಲದ ಹಾಗೂ ಸಂಶಯಾಸ್ಪದವಾಗಿದ್ದ ಒಟ್ಟು 40 ಹಾಲಿನ ಮಾದರಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಾದರಿಗಳನ್ನು ತಕ್ಷಣವೇ ಬೆಂಗಳೂರು ರಾಜ್ಯ ಆಹಾರ ಪ್ರಯೋಗಾಲಯಕ್ಕೆ ವೈಜ್ಞಾನಿಕ ವಿಶ್ಲೇಷಣೆಗೆ ಕಳುಹಿಸಲಾಗಿದೆ.
ಇದಕ್ಕೆ ಜೊತೆಗೆ, ಮುಳಬಾಗಿಲು ತಾಲ್ಲೂಕಿನ ಸಿ. ಕೊರವನೂರು ಗ್ರಾಮದಲ್ಲಿ ಅಕ್ರಮವಾಗಿ ಹಾಲು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ತಪಾಸಣೆ ನಡೆಸಿದ ಅಧಿಕಾರಿಗಳು, 28 ಕ್ಯಾನ್ಗಳಲ್ಲಿ ತುಂಬಿದ್ದ ಸುಮಾರು 1,120 ಲೀಟರ್ ಹಾಲನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಾಥಮಿಕ ತನಿಖೆಯಲ್ಲಿ ಈ ಹಾಲು ಯಾವುದೇ ಮಾನ್ಯತೆ ಅಥವಾ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದ್ದು, ಪರೀಕ್ಷಾ ವರದಿಗಳ ಆಧಾರದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಕಾರ್ಯಾಚರಣೆ ಸಾರ್ವಜನಿಕ ಆರೋಗ್ಯ ರಕ್ಷಣೆ ಹಾಗೂ ಕಲಬೆರಕೆ ಆಹಾರ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನಡೆಸಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಇದನ್ನೂ ಓದಿ…
ಓದುಗರ ಅಭಿಪ್ರಾಯಕ್ಕೆ….
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…