Advertisement
MIRROR FOCUS

ಕೋಲಾರದಲ್ಲಿ ಕುರಿ ಸಾಕಾಣಿಕೆ | ಕೃಷಿ ಜತೆ ಲಾಭದಾಯಕ ಉಪಕಸುಬು

Share

ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ ಸಾಕಾಣಿಕೆ ರೈತರಿಗೆ ಭರವಸೆಯ ಉಪಕಸುಬಾಗಿ ರೂಪುಗೊಂಡಿದೆ. ಕಡಿಮೆ ವೆಚ್ಚ, ಕಡಿಮೆ ಅಪಾಯ ಮತ್ತು ಬೇಗ ಆದಾಯ ನೀಡುವ ಸ್ವಭಾವದಿಂದಾಗಿ, ಜಿಲ್ಲೆಯಲ್ಲಿ ಅನೇಕ ರೈತರು ಕುರಿ ಸಾಕಾಣಿಕೆಯನ್ನು ಅಳವಡಿಸಿಕೊಂಡಿದ್ದಾರೆ.

Advertisement

ಕುರಿಗಾಹಿಗಳು ಬಯಲು ಪ್ರದೇಶಗಳಲ್ಲಿ ದಿನವಿಡೀ ಕುರಿಗಳನ್ನು ಮೇಯಿಸುವುದರಿಂದ, ಪ್ರತ್ಯೇಕವಾಗಿ ಮೇವನ್ನು ಬೆಳೆಸುವ ಅಥವಾ ಖರೀದಿಸುವ ಅಗತ್ಯ ಕಡಿಮೆಯಾಗಿದೆ. ಕುರಿಗಳನ್ನು ಮಾಂಸಕ್ಕಾಗಿ ಮಾರಾಟ ಮಾಡುವುದರ ಜೊತೆಗೆ, ಗೊಬ್ಬರ ಮತ್ತು ಉಣ್ಣೆಯಿಂದಲೂ ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ.

ಲಸಿಕೆಗಳಿಂದ ಮರಣ ಪ್ರಮಾಣ ಕಡಿತ : ಕಾಲಕಾಲಕ್ಕೆ ಲಸಿಕೆಗಳನ್ನು ಹಾಕಿಸುವ ಮೂಲಕ ಕುರಿಗಳಲ್ಲಿ ಮರಣ ಪ್ರಮಾಣವನ್ನು ತಗ್ಗಿಸಬಹುದಾಗಿದೆ. ಇದರಿಂದ ಉತ್ಪಾದನೆ ಹೆಚ್ಚಾಗಿ ರೈತರ ಆದಾಯವೂ ವೃದ್ಧಿಯಾಗುತ್ತಿದೆ. ಕಳೆದ ಜಾನುವಾರು ಗಣತಿಯ ಪ್ರಕಾರ, ಕೋಲಾರ ಜಿಲ್ಲೆಯಲ್ಲಿ ಸುಮಾರು 6 ರಿಂದ 7 ಲಕ್ಷಕ್ಕೂ ಅಧಿಕ ಕುರಿಗಳು ಇದ್ದು, ಜಿಲ್ಲೆಯಲ್ಲಿ ಸಾಕಷ್ಟು ರೈತರು ಕುರಿ ಸಾಕಾಣಿಕೆಯನ್ನು ಉಪಕಸುಬಾಗಿಸಿಕೊಂಡಿದ್ದಾರೆ.

ರೈತರ ಅನುಭವ :  ಕುರಿಗಾಹಿ ವಿಜಯ್ ಕುಮಾರ್ ಅವರ ಪ್ರಕಾರ, “ಮನೆಯಲ್ಲಿ 50 ಕುರಿಗಳನ್ನು ಸಾಕುತ್ತಿದ್ದೇನೆ. 25 ಕುರಿಮರಿಗಳನ್ನು ತಲಾ ₹8,000ರಂತೆ ಮಾರಾಟ ಮಾಡಿ ಉತ್ತಮ ಲಾಭ ಗಳಿಸಿದ್ದೇನೆ” ಎಂದು ಹೇಳುತ್ತಾರೆ.

ಇನ್ನೊಬ್ಬ ಕುರಿಗಾಹಿ ಮಂಜುನಾಥ್ ಅವರ ಪ್ರಕಾರ,  “ಅಮೀನ್ ಘಡ, ನಾರಿ ಸುರ್ವಣ ಹಾಗೂ ಸಿಂಧನೂರು ತಳಿಯ ಕುರಿಮರಿಗಳನ್ನು ತಂದು ಸಾಕಾಣಿಕೆ ಮಾಡುತ್ತಿದ್ದೇವೆ. ಮೂರು ತಿಂಗಳ ಬಳಿಕ ಮಾರಾಟ ಮಾಡಿದಾಗ ಪ್ರತಿ ಕುರಿಮರಿಗೆ ₹3,000ರಿಂದ ₹4,000ವರೆಗೂ ಲಾಭ ಸಿಗುತ್ತಿದೆ” ಎನ್ನುತ್ತಾರೆ.

ಶ್ರೀನಿವಾಸ ಗೌಡ ಅವರ ಪ್ರಕಾರ, “ಕುರಿಮರಿಗಳನ್ನು ₹7,000ಕ್ಕೆ ಖರೀದಿಸಿ, ಮೂರು ತಿಂಗಳ ಬಳಿಕ ₹15,000ಕ್ಕೆ ಮಾರಾಟ ಮಾಡಿದ್ದೇವೆ. ಕೃಷಿಯ ಜತೆಗೆ ಕುರಿ ಸಾಕಾಣಿಕೆ ಉತ್ತಮ ಉಪಕಸುಬಾಗಿದೆ” ಎನ್ನುತ್ತಾರೆ.

 ಪಶುಪಾಲನಾ ಇಲಾಖೆ ಕೂಡಾ ಕೃಷಿಕರಿಗೆ ನೆರವಾಗುತ್ತದೆ. ಕುರಿಗಳಿಗೆ ಜಂತುನಾಶಕ, ಕರಳುಬೇನೆ ಮತ್ತು ನೀಲಿನಾಲಿಗೆ ರೋಗಗಳು ಕಾಣಿಸಿಕೊಳ್ಳಬಹುದು. ಇದನ್ನು ತಡೆಗಟ್ಟಲು ಆರು ತಿಂಗಳಿಗೊಮ್ಮೆ ಉಚಿತ ಲಸಿಕೆಗಳನ್ನು ನೀಡಲಾಗುತ್ತಿದೆ. ಲಸಿಕೆ ಪಡೆದ ಬಳಿಕ ಗಂಭೀರ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ. ಇದರಿಂದ ಕುರಿಗಾಹಿಗಳಿಗೂ ಲಾಭ ವೃದ್ಧಿಯಾಗಲಿದೆ ಎಂದು ಹೇಳುತ್ತಾರೆ, ಮುಖ್ಯ ವೈದ್ಯಾಧಿಕಾರಿ ವಿಜಯ್ ಕುಮಾರ್ ಪಾಟೀಲ್ .

ಒಟ್ಟಿನಲ್ಲಿ ಬರಪೀಡಿತ ಪ್ರದೇಶಗಳಲ್ಲಿ ಕುರಿ ಸಾಕಾಣಿಕೆ ಕೃಷಿಗೆ ಪೂರಕವಾದ ಸ್ಥಿರ ಆದಾಯದ ಮಾರ್ಗವಾಗಿ ಹೊರಹೊಮ್ಮಿದ್ದು, ಕಡಿಮೆ ಹೂಡಿಕೆಯಲ್ಲಿ ಉತ್ತಮ ಲಾಭ ನೀಡುವ ಉಪಕಸುಬಾಗಿ ಕೋಲಾರ ಜಿಲ್ಲೆಯ ರೈತರ ಭರವಸೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

5 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

10 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

11 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

11 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

19 hours ago

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…

19 hours ago