ಕೋಲಾರದ ಕೆ.ಸಿ. ವ್ಯಾಲಿ ಎರಡನೇ ಹಂತದ ಯೋಜನೆ ಲೋಕಾರ್ಪಣೆ

September 6, 2025
6:18 AM

ಸಂಸ್ಕರಿಸಿದ ಬೆಂಗಳೂರಿನ ತ್ಯಾಜ್ಯ ನೀರನ್ನು 446  ಕೋಟಿ ವೆಚ್ಚದಲ್ಲಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ 30  ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಮೂಲಕ   ಲೋಕಾರ್ಪಣೆಗೊಳಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ, ಕೆ.ಸಿ.ವ್ಯಾಲಿ ಯೋಜನೆಯ ಮೊದಲನೇ ಹಂತ ಬಹಳ ಯಶಸ್ವಿಯಾಗಿದೆ. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಯ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ.  ಕೆರೆ ತುಂಬಿಸಿದ ವ್ತಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಈ ಹಿಂದೆ ಸುಮಾರು 1200 ರಿಂದ 1500 ಅಡಿಗೆ ಬೋರ್‌ವೆಲ್ ನೀರು ದೊರೆಯುತ್ತಿತ್ತು. ಈಗ ಸುಮಾರು 450 ಅಡಿಗೆ ನೀರು ದೊರೆಯುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಸುಮಾರು 272 ಕೆರೆಗಳಿಗೆ ನೀರು ತುಂಬಿಸುವಂತಾಗಲಿದೆ. ಕೋಲಾರ ಜಿಲ್ಲೆಯಲ್ಲಿ ಯಾವುದೇ ಶಾಶ್ವತ ನದಿಗಳು, ನೀರಾವರಿ ಯೋಜನೆ ಇಲ್ಲದ ಕಾರಣ ಈ ಯೋಜನೆಯಿಂದ ಬಹಳ ಅನುಕೂಲವಾಗಲಿದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕೆ.ಸಿ.ವ್ಯಾಲಿ ಯೋಜನೆಗೆ ಎರಡು ಹಂತಗಳಲ್ಲಿ ಸುಮಾರು 395 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲಾಗುವುದು. ಜಿಲ್ಲೆಯ ಆಯಾ ತಾಲೂಕುಗಳಲ್ಲಿ ಶಾಸಕರು ಕೆರೆಗಳಿಗೆ ಭಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror