ಕೋಲಾರದ ಕೆ.ಸಿ. ವ್ಯಾಲಿ ಎರಡನೇ ಹಂತದ ಯೋಜನೆ ಲೋಕಾರ್ಪಣೆ

September 6, 2025
6:18 AM

ಸಂಸ್ಕರಿಸಿದ ಬೆಂಗಳೂರಿನ ತ್ಯಾಜ್ಯ ನೀರನ್ನು 446  ಕೋಟಿ ವೆಚ್ಚದಲ್ಲಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ 30  ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಮೂಲಕ   ಲೋಕಾರ್ಪಣೆಗೊಳಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ, ಕೆ.ಸಿ.ವ್ಯಾಲಿ ಯೋಜನೆಯ ಮೊದಲನೇ ಹಂತ ಬಹಳ ಯಶಸ್ವಿಯಾಗಿದೆ. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಯ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ.  ಕೆರೆ ತುಂಬಿಸಿದ ವ್ತಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಈ ಹಿಂದೆ ಸುಮಾರು 1200 ರಿಂದ 1500 ಅಡಿಗೆ ಬೋರ್‌ವೆಲ್ ನೀರು ದೊರೆಯುತ್ತಿತ್ತು. ಈಗ ಸುಮಾರು 450 ಅಡಿಗೆ ನೀರು ದೊರೆಯುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಸುಮಾರು 272 ಕೆರೆಗಳಿಗೆ ನೀರು ತುಂಬಿಸುವಂತಾಗಲಿದೆ. ಕೋಲಾರ ಜಿಲ್ಲೆಯಲ್ಲಿ ಯಾವುದೇ ಶಾಶ್ವತ ನದಿಗಳು, ನೀರಾವರಿ ಯೋಜನೆ ಇಲ್ಲದ ಕಾರಣ ಈ ಯೋಜನೆಯಿಂದ ಬಹಳ ಅನುಕೂಲವಾಗಲಿದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕೆ.ಸಿ.ವ್ಯಾಲಿ ಯೋಜನೆಗೆ ಎರಡು ಹಂತಗಳಲ್ಲಿ ಸುಮಾರು 395 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲಾಗುವುದು. ಜಿಲ್ಲೆಯ ಆಯಾ ತಾಲೂಕುಗಳಲ್ಲಿ ಶಾಸಕರು ಕೆರೆಗಳಿಗೆ ಭಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror