Advertisement
MIRROR FOCUS

ಕೋಲಾರದ ಕೆ.ಸಿ. ವ್ಯಾಲಿ ಎರಡನೇ ಹಂತದ ಯೋಜನೆ ಲೋಕಾರ್ಪಣೆ

Share

ಸಂಸ್ಕರಿಸಿದ ಬೆಂಗಳೂರಿನ ತ್ಯಾಜ್ಯ ನೀರನ್ನು 446  ಕೋಟಿ ವೆಚ್ಚದಲ್ಲಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ 30  ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಮೂಲಕ   ಲೋಕಾರ್ಪಣೆಗೊಳಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ, ಕೆ.ಸಿ.ವ್ಯಾಲಿ ಯೋಜನೆಯ ಮೊದಲನೇ ಹಂತ ಬಹಳ ಯಶಸ್ವಿಯಾಗಿದೆ. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಯ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ.  ಕೆರೆ ತುಂಬಿಸಿದ ವ್ತಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಈ ಹಿಂದೆ ಸುಮಾರು 1200 ರಿಂದ 1500 ಅಡಿಗೆ ಬೋರ್‌ವೆಲ್ ನೀರು ದೊರೆಯುತ್ತಿತ್ತು. ಈಗ ಸುಮಾರು 450 ಅಡಿಗೆ ನೀರು ದೊರೆಯುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಸುಮಾರು 272 ಕೆರೆಗಳಿಗೆ ನೀರು ತುಂಬಿಸುವಂತಾಗಲಿದೆ. ಕೋಲಾರ ಜಿಲ್ಲೆಯಲ್ಲಿ ಯಾವುದೇ ಶಾಶ್ವತ ನದಿಗಳು, ನೀರಾವರಿ ಯೋಜನೆ ಇಲ್ಲದ ಕಾರಣ ಈ ಯೋಜನೆಯಿಂದ ಬಹಳ ಅನುಕೂಲವಾಗಲಿದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕೆ.ಸಿ.ವ್ಯಾಲಿ ಯೋಜನೆಗೆ ಎರಡು ಹಂತಗಳಲ್ಲಿ ಸುಮಾರು 395 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲಾಗುವುದು. ಜಿಲ್ಲೆಯ ಆಯಾ ತಾಲೂಕುಗಳಲ್ಲಿ ಶಾಸಕರು ಕೆರೆಗಳಿಗೆ ಭಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

13 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

2 days ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

2 days ago