Advertisement
MIRROR FOCUS

ಕೋಲಾರದ ಕೆ.ಸಿ. ವ್ಯಾಲಿ ಎರಡನೇ ಹಂತದ ಯೋಜನೆ ಲೋಕಾರ್ಪಣೆ

Share

ಸಂಸ್ಕರಿಸಿದ ಬೆಂಗಳೂರಿನ ತ್ಯಾಜ್ಯ ನೀರನ್ನು 446  ಕೋಟಿ ವೆಚ್ಚದಲ್ಲಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ 30  ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಮೂಲಕ   ಲೋಕಾರ್ಪಣೆಗೊಳಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ, ಕೆ.ಸಿ.ವ್ಯಾಲಿ ಯೋಜನೆಯ ಮೊದಲನೇ ಹಂತ ಬಹಳ ಯಶಸ್ವಿಯಾಗಿದೆ. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಯ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ.  ಕೆರೆ ತುಂಬಿಸಿದ ವ್ತಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಈ ಹಿಂದೆ ಸುಮಾರು 1200 ರಿಂದ 1500 ಅಡಿಗೆ ಬೋರ್‌ವೆಲ್ ನೀರು ದೊರೆಯುತ್ತಿತ್ತು. ಈಗ ಸುಮಾರು 450 ಅಡಿಗೆ ನೀರು ದೊರೆಯುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಸುಮಾರು 272 ಕೆರೆಗಳಿಗೆ ನೀರು ತುಂಬಿಸುವಂತಾಗಲಿದೆ. ಕೋಲಾರ ಜಿಲ್ಲೆಯಲ್ಲಿ ಯಾವುದೇ ಶಾಶ್ವತ ನದಿಗಳು, ನೀರಾವರಿ ಯೋಜನೆ ಇಲ್ಲದ ಕಾರಣ ಈ ಯೋಜನೆಯಿಂದ ಬಹಳ ಅನುಕೂಲವಾಗಲಿದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕೆ.ಸಿ.ವ್ಯಾಲಿ ಯೋಜನೆಗೆ ಎರಡು ಹಂತಗಳಲ್ಲಿ ಸುಮಾರು 395 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲಾಗುವುದು. ಜಿಲ್ಲೆಯ ಆಯಾ ತಾಲೂಕುಗಳಲ್ಲಿ ಶಾಸಕರು ಕೆರೆಗಳಿಗೆ ಭಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

3 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

10 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

12 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

12 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago