Advertisement
MIRROR FOCUS

ಅಡಿಕೆಗೆ ಕೊಳೆರೋಗ | ದ ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆಗಾರರನ್ನು ಕಾಡಿದೆ ಕೊಳೆರೋಗ |

Share

Advertisement
Advertisement
ಅಡಿಕೆಗೆ ಕೊಳೆರೋಗ ಈ ಬಾರಿಯೂ ಕಾಡಿದೆ. ಬೆಳೆಗಾರರು ಈ ಬಾರಿಯೂ ರೋಗ ನಿಯಂತ್ರಣದ ಸಾಹಸದಲ್ಲಿದ್ದಾರೆ. ಮಳೆ-ಬಿಸಿಲಿನ ಆಟದ ನಡುವೆ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆಯಲ್ಲಿ ಬ್ಯುಸಿಯಾಗಿದ್ದಾರೆ.

ಅಡಿಕೆ ಬೆಳೆಗಾರರಿಗೆ ಕೊಳೆರೋಗ ಅಥವಾ ಮಹಾಳಿ ರೋಗ ನಿಯಂತ್ರಣ ಪ್ರತೀ ವರ್ಷದ ಮಳೆಗಾಲ ಬಹುದೊಡ್ಡ ಸವಾಲಿನ ಕೆಲಸ. ಈ ಬಾರಿಯೂ ಅಡಿಕೆಗೆ ಕೊಳೆರೋಗ ಬಾಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಮಲೆನಾಡು ಭಾಗದ ಅಡಿಕೆ ಬೆಳೆಗಾರರಿಗೆ ಕೊಳೆರೋಗ ನಿಯಂತ್ರಣವೇ ಸವಾಲಿನ ಕೆಲಸ. ಪ್ರತೀ ಬಾರಿ ಮಳೆಗಾಲದ ಮುನ್ನ ಔಷಧಿ ಸಿಂಪಡಣೆ ಅತೀ ಜರೂರಾಗಿ ಆಗಬೇಕಾದ ಕೆಲಸ. ಅದಾಗಿ ಸುಮಾರು 30  ದಿನಗಳ ಬಳಿಕ ಇನ್ನೊಂದು ಸುತ್ತಿನ ಔಷಧಿ ಸಿಂಪಡಣೆ ಅತೀ ಅಗತ್ಯವಾಗಿದೆ. ಈ ಸಮಯದಲ್ಲಿ ಬೆಳೆಗಾರರು ಸೋಲುತ್ತಾರೆ. ಔಷಧಿ ಸಿಂಪಡಣೆಗೆ ನುರಿತ ಕಾರ್ಮಿಕರ ಕೊರತೆ ಒಂದು ಕಾರಣವಾದರೆ ಎಡೆಬಿಡದೆ ಸುರಿಯುವ ಮಳೆಯೂ ಇನ್ನೊಂದು ಕಾರಣ. ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣವನ್ನು ವಿಜ್ಞಾನಿಗಳು ತಿಳಿಸುತ್ತಾರಾದರೂ ಅದರ ಹೊರತಾಗಿ ವಿವಿಧ ಬಗೆಯ ಔಷಧಿಗಳ ಸಿಂಪಡಣೆಯನ್ನೂ ಬೆಳೆಗಾರರು ಮಾಡಿ ಯಶಸ್ಸು ಕಂಡವರೂ ಇದ್ದಾರೆ.

ಈ ಬಾರಿ ವರ್ಷವಿಡೀ ಮಳೆಯ ಪ್ರಭಾವ ಇತ್ತು. ಮೇ ತಿಂಗಳ ಕೊನೆಯಲ್ಲಿಯೇ ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆ ಕೆಲವರಿಗೆ ಸಾಧ್ಯವಾಗಿತ್ತು. ಜೂನ್‌ ತಿಂಗಳಲ್ಲಿ  ಮಳೆಯ ಪ್ರಭಾವ ಸ್ವಲ್ಪ ಕಡಿಮೆ ಇದ್ದರೂ ಆ ಬಳಿಕ ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಮಲೆನಾಡು ಭಾಗವಾದ ಅದರಲ್ಲೂ ಸುಳ್ಯ, ಕಡಬ, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೊಳೆರೋಗ ಬಾಧಿಸಿದೆ. ಆದರೆ ಭಾರೀ ಪ್ರಮಾಣದಲ್ಲಿ ಕೊಳೆರೋಗ ಎಂದು ಹೇಳುವಷ್ಟು ಈ ಬಾರಿ ಇಲ್ಲದೇ ಇದ್ದರೂ ಕೆಲವು ಬೆಳೆಗಾರರ ತೋಟದಲ್ಲಿ  ವಿಪರೀತವಾಗಿ ಕಂಡುಬಂದಿದೆ. ಇದರ ನಿಯಂತ್ರಣಕ್ಕೆ ಸರ್ಕಸ್‌ ಮಾಡುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

10 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

10 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

10 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

11 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

11 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

11 hours ago