ಅಡಿಕೆ ಬೆಳೆಗಾರರಿಗೆ ಕೊಳೆರೋಗ ಅಥವಾ ಮಹಾಳಿ ರೋಗ ನಿಯಂತ್ರಣ ಪ್ರತೀ ವರ್ಷದ ಮಳೆಗಾಲ ಬಹುದೊಡ್ಡ ಸವಾಲಿನ ಕೆಲಸ. ಈ ಬಾರಿಯೂ ಅಡಿಕೆಗೆ ಕೊಳೆರೋಗ ಬಾಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಮಲೆನಾಡು ಭಾಗದ ಅಡಿಕೆ ಬೆಳೆಗಾರರಿಗೆ ಕೊಳೆರೋಗ ನಿಯಂತ್ರಣವೇ ಸವಾಲಿನ ಕೆಲಸ. ಪ್ರತೀ ಬಾರಿ ಮಳೆಗಾಲದ ಮುನ್ನ ಔಷಧಿ ಸಿಂಪಡಣೆ ಅತೀ ಜರೂರಾಗಿ ಆಗಬೇಕಾದ ಕೆಲಸ. ಅದಾಗಿ ಸುಮಾರು 30 ದಿನಗಳ ಬಳಿಕ ಇನ್ನೊಂದು ಸುತ್ತಿನ ಔಷಧಿ ಸಿಂಪಡಣೆ ಅತೀ ಅಗತ್ಯವಾಗಿದೆ. ಈ ಸಮಯದಲ್ಲಿ ಬೆಳೆಗಾರರು ಸೋಲುತ್ತಾರೆ. ಔಷಧಿ ಸಿಂಪಡಣೆಗೆ ನುರಿತ ಕಾರ್ಮಿಕರ ಕೊರತೆ ಒಂದು ಕಾರಣವಾದರೆ ಎಡೆಬಿಡದೆ ಸುರಿಯುವ ಮಳೆಯೂ ಇನ್ನೊಂದು ಕಾರಣ. ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣವನ್ನು ವಿಜ್ಞಾನಿಗಳು ತಿಳಿಸುತ್ತಾರಾದರೂ ಅದರ ಹೊರತಾಗಿ ವಿವಿಧ ಬಗೆಯ ಔಷಧಿಗಳ ಸಿಂಪಡಣೆಯನ್ನೂ ಬೆಳೆಗಾರರು ಮಾಡಿ ಯಶಸ್ಸು ಕಂಡವರೂ ಇದ್ದಾರೆ.
ಈ ಬಾರಿ ವರ್ಷವಿಡೀ ಮಳೆಯ ಪ್ರಭಾವ ಇತ್ತು. ಮೇ ತಿಂಗಳ ಕೊನೆಯಲ್ಲಿಯೇ ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆ ಕೆಲವರಿಗೆ ಸಾಧ್ಯವಾಗಿತ್ತು. ಜೂನ್ ತಿಂಗಳಲ್ಲಿ ಮಳೆಯ ಪ್ರಭಾವ ಸ್ವಲ್ಪ ಕಡಿಮೆ ಇದ್ದರೂ ಆ ಬಳಿಕ ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಮಲೆನಾಡು ಭಾಗವಾದ ಅದರಲ್ಲೂ ಸುಳ್ಯ, ಕಡಬ, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೊಳೆರೋಗ ಬಾಧಿಸಿದೆ. ಆದರೆ ಭಾರೀ ಪ್ರಮಾಣದಲ್ಲಿ ಕೊಳೆರೋಗ ಎಂದು ಹೇಳುವಷ್ಟು ಈ ಬಾರಿ ಇಲ್ಲದೇ ಇದ್ದರೂ ಕೆಲವು ಬೆಳೆಗಾರರ ತೋಟದಲ್ಲಿ ವಿಪರೀತವಾಗಿ ಕಂಡುಬಂದಿದೆ. ಇದರ ನಿಯಂತ್ರಣಕ್ಕೆ ಸರ್ಕಸ್ ಮಾಡುತ್ತಿದ್ದಾರೆ.
ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…
ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…
ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…
ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…
ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ.…