Advertisement
MIRROR FOCUS

ಅಡಿಕೆಗೆ ಕೊಳೆರೋಗ | ದ ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆಗಾರರನ್ನು ಕಾಡಿದೆ ಕೊಳೆರೋಗ |

Share

ಅಡಿಕೆಗೆ ಕೊಳೆರೋಗ ಈ ಬಾರಿಯೂ ಕಾಡಿದೆ. ಬೆಳೆಗಾರರು ಈ ಬಾರಿಯೂ ರೋಗ ನಿಯಂತ್ರಣದ ಸಾಹಸದಲ್ಲಿದ್ದಾರೆ. ಮಳೆ-ಬಿಸಿಲಿನ ಆಟದ ನಡುವೆ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆಯಲ್ಲಿ ಬ್ಯುಸಿಯಾಗಿದ್ದಾರೆ.

ಅಡಿಕೆ ಬೆಳೆಗಾರರಿಗೆ ಕೊಳೆರೋಗ ಅಥವಾ ಮಹಾಳಿ ರೋಗ ನಿಯಂತ್ರಣ ಪ್ರತೀ ವರ್ಷದ ಮಳೆಗಾಲ ಬಹುದೊಡ್ಡ ಸವಾಲಿನ ಕೆಲಸ. ಈ ಬಾರಿಯೂ ಅಡಿಕೆಗೆ ಕೊಳೆರೋಗ ಬಾಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಮಲೆನಾಡು ಭಾಗದ ಅಡಿಕೆ ಬೆಳೆಗಾರರಿಗೆ ಕೊಳೆರೋಗ ನಿಯಂತ್ರಣವೇ ಸವಾಲಿನ ಕೆಲಸ. ಪ್ರತೀ ಬಾರಿ ಮಳೆಗಾಲದ ಮುನ್ನ ಔಷಧಿ ಸಿಂಪಡಣೆ ಅತೀ ಜರೂರಾಗಿ ಆಗಬೇಕಾದ ಕೆಲಸ. ಅದಾಗಿ ಸುಮಾರು 30  ದಿನಗಳ ಬಳಿಕ ಇನ್ನೊಂದು ಸುತ್ತಿನ ಔಷಧಿ ಸಿಂಪಡಣೆ ಅತೀ ಅಗತ್ಯವಾಗಿದೆ. ಈ ಸಮಯದಲ್ಲಿ ಬೆಳೆಗಾರರು ಸೋಲುತ್ತಾರೆ. ಔಷಧಿ ಸಿಂಪಡಣೆಗೆ ನುರಿತ ಕಾರ್ಮಿಕರ ಕೊರತೆ ಒಂದು ಕಾರಣವಾದರೆ ಎಡೆಬಿಡದೆ ಸುರಿಯುವ ಮಳೆಯೂ ಇನ್ನೊಂದು ಕಾರಣ. ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣವನ್ನು ವಿಜ್ಞಾನಿಗಳು ತಿಳಿಸುತ್ತಾರಾದರೂ ಅದರ ಹೊರತಾಗಿ ವಿವಿಧ ಬಗೆಯ ಔಷಧಿಗಳ ಸಿಂಪಡಣೆಯನ್ನೂ ಬೆಳೆಗಾರರು ಮಾಡಿ ಯಶಸ್ಸು ಕಂಡವರೂ ಇದ್ದಾರೆ.

ಈ ಬಾರಿ ವರ್ಷವಿಡೀ ಮಳೆಯ ಪ್ರಭಾವ ಇತ್ತು. ಮೇ ತಿಂಗಳ ಕೊನೆಯಲ್ಲಿಯೇ ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆ ಕೆಲವರಿಗೆ ಸಾಧ್ಯವಾಗಿತ್ತು. ಜೂನ್‌ ತಿಂಗಳಲ್ಲಿ  ಮಳೆಯ ಪ್ರಭಾವ ಸ್ವಲ್ಪ ಕಡಿಮೆ ಇದ್ದರೂ ಆ ಬಳಿಕ ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಮಲೆನಾಡು ಭಾಗವಾದ ಅದರಲ್ಲೂ ಸುಳ್ಯ, ಕಡಬ, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೊಳೆರೋಗ ಬಾಧಿಸಿದೆ. ಆದರೆ ಭಾರೀ ಪ್ರಮಾಣದಲ್ಲಿ ಕೊಳೆರೋಗ ಎಂದು ಹೇಳುವಷ್ಟು ಈ ಬಾರಿ ಇಲ್ಲದೇ ಇದ್ದರೂ ಕೆಲವು ಬೆಳೆಗಾರರ ತೋಟದಲ್ಲಿ  ವಿಪರೀತವಾಗಿ ಕಂಡುಬಂದಿದೆ. ಇದರ ನಿಯಂತ್ರಣಕ್ಕೆ ಸರ್ಕಸ್‌ ಮಾಡುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

32 minutes ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

11 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

12 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

15 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago