Advertisement
MIRROR FOCUS

ಅಡಿಕೆಗೆ ಕೊಳೆರೋಗ | ದ ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆಗಾರರನ್ನು ಕಾಡಿದೆ ಕೊಳೆರೋಗ |

Share

ಅಡಿಕೆಗೆ ಕೊಳೆರೋಗ ಈ ಬಾರಿಯೂ ಕಾಡಿದೆ. ಬೆಳೆಗಾರರು ಈ ಬಾರಿಯೂ ರೋಗ ನಿಯಂತ್ರಣದ ಸಾಹಸದಲ್ಲಿದ್ದಾರೆ. ಮಳೆ-ಬಿಸಿಲಿನ ಆಟದ ನಡುವೆ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆಯಲ್ಲಿ ಬ್ಯುಸಿಯಾಗಿದ್ದಾರೆ.

ಅಡಿಕೆ ಬೆಳೆಗಾರರಿಗೆ ಕೊಳೆರೋಗ ಅಥವಾ ಮಹಾಳಿ ರೋಗ ನಿಯಂತ್ರಣ ಪ್ರತೀ ವರ್ಷದ ಮಳೆಗಾಲ ಬಹುದೊಡ್ಡ ಸವಾಲಿನ ಕೆಲಸ. ಈ ಬಾರಿಯೂ ಅಡಿಕೆಗೆ ಕೊಳೆರೋಗ ಬಾಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಮಲೆನಾಡು ಭಾಗದ ಅಡಿಕೆ ಬೆಳೆಗಾರರಿಗೆ ಕೊಳೆರೋಗ ನಿಯಂತ್ರಣವೇ ಸವಾಲಿನ ಕೆಲಸ. ಪ್ರತೀ ಬಾರಿ ಮಳೆಗಾಲದ ಮುನ್ನ ಔಷಧಿ ಸಿಂಪಡಣೆ ಅತೀ ಜರೂರಾಗಿ ಆಗಬೇಕಾದ ಕೆಲಸ. ಅದಾಗಿ ಸುಮಾರು 30  ದಿನಗಳ ಬಳಿಕ ಇನ್ನೊಂದು ಸುತ್ತಿನ ಔಷಧಿ ಸಿಂಪಡಣೆ ಅತೀ ಅಗತ್ಯವಾಗಿದೆ. ಈ ಸಮಯದಲ್ಲಿ ಬೆಳೆಗಾರರು ಸೋಲುತ್ತಾರೆ. ಔಷಧಿ ಸಿಂಪಡಣೆಗೆ ನುರಿತ ಕಾರ್ಮಿಕರ ಕೊರತೆ ಒಂದು ಕಾರಣವಾದರೆ ಎಡೆಬಿಡದೆ ಸುರಿಯುವ ಮಳೆಯೂ ಇನ್ನೊಂದು ಕಾರಣ. ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣವನ್ನು ವಿಜ್ಞಾನಿಗಳು ತಿಳಿಸುತ್ತಾರಾದರೂ ಅದರ ಹೊರತಾಗಿ ವಿವಿಧ ಬಗೆಯ ಔಷಧಿಗಳ ಸಿಂಪಡಣೆಯನ್ನೂ ಬೆಳೆಗಾರರು ಮಾಡಿ ಯಶಸ್ಸು ಕಂಡವರೂ ಇದ್ದಾರೆ.

ಈ ಬಾರಿ ವರ್ಷವಿಡೀ ಮಳೆಯ ಪ್ರಭಾವ ಇತ್ತು. ಮೇ ತಿಂಗಳ ಕೊನೆಯಲ್ಲಿಯೇ ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆ ಕೆಲವರಿಗೆ ಸಾಧ್ಯವಾಗಿತ್ತು. ಜೂನ್‌ ತಿಂಗಳಲ್ಲಿ  ಮಳೆಯ ಪ್ರಭಾವ ಸ್ವಲ್ಪ ಕಡಿಮೆ ಇದ್ದರೂ ಆ ಬಳಿಕ ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಮಲೆನಾಡು ಭಾಗವಾದ ಅದರಲ್ಲೂ ಸುಳ್ಯ, ಕಡಬ, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೊಳೆರೋಗ ಬಾಧಿಸಿದೆ. ಆದರೆ ಭಾರೀ ಪ್ರಮಾಣದಲ್ಲಿ ಕೊಳೆರೋಗ ಎಂದು ಹೇಳುವಷ್ಟು ಈ ಬಾರಿ ಇಲ್ಲದೇ ಇದ್ದರೂ ಕೆಲವು ಬೆಳೆಗಾರರ ತೋಟದಲ್ಲಿ  ವಿಪರೀತವಾಗಿ ಕಂಡುಬಂದಿದೆ. ಇದರ ನಿಯಂತ್ರಣಕ್ಕೆ ಸರ್ಕಸ್‌ ಮಾಡುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

7 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

18 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

22 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago