ಅಡಿಕೆ ಬೆಳೆಗಾರರಿಗೆ ಕೊಳೆರೋಗ ಅಥವಾ ಮಹಾಳಿ ರೋಗ ನಿಯಂತ್ರಣ ಪ್ರತೀ ವರ್ಷದ ಮಳೆಗಾಲ ಬಹುದೊಡ್ಡ ಸವಾಲಿನ ಕೆಲಸ. ಈ ಬಾರಿಯೂ ಅಡಿಕೆಗೆ ಕೊಳೆರೋಗ ಬಾಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಮಲೆನಾಡು ಭಾಗದ ಅಡಿಕೆ ಬೆಳೆಗಾರರಿಗೆ ಕೊಳೆರೋಗ ನಿಯಂತ್ರಣವೇ ಸವಾಲಿನ ಕೆಲಸ. ಪ್ರತೀ ಬಾರಿ ಮಳೆಗಾಲದ ಮುನ್ನ ಔಷಧಿ ಸಿಂಪಡಣೆ ಅತೀ ಜರೂರಾಗಿ ಆಗಬೇಕಾದ ಕೆಲಸ. ಅದಾಗಿ ಸುಮಾರು 30 ದಿನಗಳ ಬಳಿಕ ಇನ್ನೊಂದು ಸುತ್ತಿನ ಔಷಧಿ ಸಿಂಪಡಣೆ ಅತೀ ಅಗತ್ಯವಾಗಿದೆ. ಈ ಸಮಯದಲ್ಲಿ ಬೆಳೆಗಾರರು ಸೋಲುತ್ತಾರೆ. ಔಷಧಿ ಸಿಂಪಡಣೆಗೆ ನುರಿತ ಕಾರ್ಮಿಕರ ಕೊರತೆ ಒಂದು ಕಾರಣವಾದರೆ ಎಡೆಬಿಡದೆ ಸುರಿಯುವ ಮಳೆಯೂ ಇನ್ನೊಂದು ಕಾರಣ. ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣವನ್ನು ವಿಜ್ಞಾನಿಗಳು ತಿಳಿಸುತ್ತಾರಾದರೂ ಅದರ ಹೊರತಾಗಿ ವಿವಿಧ ಬಗೆಯ ಔಷಧಿಗಳ ಸಿಂಪಡಣೆಯನ್ನೂ ಬೆಳೆಗಾರರು ಮಾಡಿ ಯಶಸ್ಸು ಕಂಡವರೂ ಇದ್ದಾರೆ.
ಈ ಬಾರಿ ವರ್ಷವಿಡೀ ಮಳೆಯ ಪ್ರಭಾವ ಇತ್ತು. ಮೇ ತಿಂಗಳ ಕೊನೆಯಲ್ಲಿಯೇ ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆ ಕೆಲವರಿಗೆ ಸಾಧ್ಯವಾಗಿತ್ತು. ಜೂನ್ ತಿಂಗಳಲ್ಲಿ ಮಳೆಯ ಪ್ರಭಾವ ಸ್ವಲ್ಪ ಕಡಿಮೆ ಇದ್ದರೂ ಆ ಬಳಿಕ ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಮಲೆನಾಡು ಭಾಗವಾದ ಅದರಲ್ಲೂ ಸುಳ್ಯ, ಕಡಬ, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೊಳೆರೋಗ ಬಾಧಿಸಿದೆ. ಆದರೆ ಭಾರೀ ಪ್ರಮಾಣದಲ್ಲಿ ಕೊಳೆರೋಗ ಎಂದು ಹೇಳುವಷ್ಟು ಈ ಬಾರಿ ಇಲ್ಲದೇ ಇದ್ದರೂ ಕೆಲವು ಬೆಳೆಗಾರರ ತೋಟದಲ್ಲಿ ವಿಪರೀತವಾಗಿ ಕಂಡುಬಂದಿದೆ. ಇದರ ನಿಯಂತ್ರಣಕ್ಕೆ ಸರ್ಕಸ್ ಮಾಡುತ್ತಿದ್ದಾರೆ.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…