Advertisement
MIRROR FOCUS

ಅಡಿಕೆಗೆ ಕೊಳೆರೋಗ | ದ ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆಗಾರರನ್ನು ಕಾಡಿದೆ ಕೊಳೆರೋಗ |

Share

ಅಡಿಕೆಗೆ ಕೊಳೆರೋಗ ಈ ಬಾರಿಯೂ ಕಾಡಿದೆ. ಬೆಳೆಗಾರರು ಈ ಬಾರಿಯೂ ರೋಗ ನಿಯಂತ್ರಣದ ಸಾಹಸದಲ್ಲಿದ್ದಾರೆ. ಮಳೆ-ಬಿಸಿಲಿನ ಆಟದ ನಡುವೆ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆಯಲ್ಲಿ ಬ್ಯುಸಿಯಾಗಿದ್ದಾರೆ.

ಅಡಿಕೆ ಬೆಳೆಗಾರರಿಗೆ ಕೊಳೆರೋಗ ಅಥವಾ ಮಹಾಳಿ ರೋಗ ನಿಯಂತ್ರಣ ಪ್ರತೀ ವರ್ಷದ ಮಳೆಗಾಲ ಬಹುದೊಡ್ಡ ಸವಾಲಿನ ಕೆಲಸ. ಈ ಬಾರಿಯೂ ಅಡಿಕೆಗೆ ಕೊಳೆರೋಗ ಬಾಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಮಲೆನಾಡು ಭಾಗದ ಅಡಿಕೆ ಬೆಳೆಗಾರರಿಗೆ ಕೊಳೆರೋಗ ನಿಯಂತ್ರಣವೇ ಸವಾಲಿನ ಕೆಲಸ. ಪ್ರತೀ ಬಾರಿ ಮಳೆಗಾಲದ ಮುನ್ನ ಔಷಧಿ ಸಿಂಪಡಣೆ ಅತೀ ಜರೂರಾಗಿ ಆಗಬೇಕಾದ ಕೆಲಸ. ಅದಾಗಿ ಸುಮಾರು 30  ದಿನಗಳ ಬಳಿಕ ಇನ್ನೊಂದು ಸುತ್ತಿನ ಔಷಧಿ ಸಿಂಪಡಣೆ ಅತೀ ಅಗತ್ಯವಾಗಿದೆ. ಈ ಸಮಯದಲ್ಲಿ ಬೆಳೆಗಾರರು ಸೋಲುತ್ತಾರೆ. ಔಷಧಿ ಸಿಂಪಡಣೆಗೆ ನುರಿತ ಕಾರ್ಮಿಕರ ಕೊರತೆ ಒಂದು ಕಾರಣವಾದರೆ ಎಡೆಬಿಡದೆ ಸುರಿಯುವ ಮಳೆಯೂ ಇನ್ನೊಂದು ಕಾರಣ. ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣವನ್ನು ವಿಜ್ಞಾನಿಗಳು ತಿಳಿಸುತ್ತಾರಾದರೂ ಅದರ ಹೊರತಾಗಿ ವಿವಿಧ ಬಗೆಯ ಔಷಧಿಗಳ ಸಿಂಪಡಣೆಯನ್ನೂ ಬೆಳೆಗಾರರು ಮಾಡಿ ಯಶಸ್ಸು ಕಂಡವರೂ ಇದ್ದಾರೆ.

ಈ ಬಾರಿ ವರ್ಷವಿಡೀ ಮಳೆಯ ಪ್ರಭಾವ ಇತ್ತು. ಮೇ ತಿಂಗಳ ಕೊನೆಯಲ್ಲಿಯೇ ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆ ಕೆಲವರಿಗೆ ಸಾಧ್ಯವಾಗಿತ್ತು. ಜೂನ್‌ ತಿಂಗಳಲ್ಲಿ  ಮಳೆಯ ಪ್ರಭಾವ ಸ್ವಲ್ಪ ಕಡಿಮೆ ಇದ್ದರೂ ಆ ಬಳಿಕ ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಮಲೆನಾಡು ಭಾಗವಾದ ಅದರಲ್ಲೂ ಸುಳ್ಯ, ಕಡಬ, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೊಳೆರೋಗ ಬಾಧಿಸಿದೆ. ಆದರೆ ಭಾರೀ ಪ್ರಮಾಣದಲ್ಲಿ ಕೊಳೆರೋಗ ಎಂದು ಹೇಳುವಷ್ಟು ಈ ಬಾರಿ ಇಲ್ಲದೇ ಇದ್ದರೂ ಕೆಲವು ಬೆಳೆಗಾರರ ತೋಟದಲ್ಲಿ  ವಿಪರೀತವಾಗಿ ಕಂಡುಬಂದಿದೆ. ಇದರ ನಿಯಂತ್ರಣಕ್ಕೆ ಸರ್ಕಸ್‌ ಮಾಡುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

15 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago