ಅಡಿಕೆ ಬೆಳೆಗಾರರಿಗೆ ಕೊಳೆರೋಗ ಅಥವಾ ಮಹಾಳಿ ರೋಗ ನಿಯಂತ್ರಣ ಪ್ರತೀ ವರ್ಷದ ಮಳೆಗಾಲ ಬಹುದೊಡ್ಡ ಸವಾಲಿನ ಕೆಲಸ. ಈ ಬಾರಿಯೂ ಅಡಿಕೆಗೆ ಕೊಳೆರೋಗ ಬಾಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಮಲೆನಾಡು ಭಾಗದ ಅಡಿಕೆ ಬೆಳೆಗಾರರಿಗೆ ಕೊಳೆರೋಗ ನಿಯಂತ್ರಣವೇ ಸವಾಲಿನ ಕೆಲಸ. ಪ್ರತೀ ಬಾರಿ ಮಳೆಗಾಲದ ಮುನ್ನ ಔಷಧಿ ಸಿಂಪಡಣೆ ಅತೀ ಜರೂರಾಗಿ ಆಗಬೇಕಾದ ಕೆಲಸ. ಅದಾಗಿ ಸುಮಾರು 30 ದಿನಗಳ ಬಳಿಕ ಇನ್ನೊಂದು ಸುತ್ತಿನ ಔಷಧಿ ಸಿಂಪಡಣೆ ಅತೀ ಅಗತ್ಯವಾಗಿದೆ. ಈ ಸಮಯದಲ್ಲಿ ಬೆಳೆಗಾರರು ಸೋಲುತ್ತಾರೆ. ಔಷಧಿ ಸಿಂಪಡಣೆಗೆ ನುರಿತ ಕಾರ್ಮಿಕರ ಕೊರತೆ ಒಂದು ಕಾರಣವಾದರೆ ಎಡೆಬಿಡದೆ ಸುರಿಯುವ ಮಳೆಯೂ ಇನ್ನೊಂದು ಕಾರಣ. ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣವನ್ನು ವಿಜ್ಞಾನಿಗಳು ತಿಳಿಸುತ್ತಾರಾದರೂ ಅದರ ಹೊರತಾಗಿ ವಿವಿಧ ಬಗೆಯ ಔಷಧಿಗಳ ಸಿಂಪಡಣೆಯನ್ನೂ ಬೆಳೆಗಾರರು ಮಾಡಿ ಯಶಸ್ಸು ಕಂಡವರೂ ಇದ್ದಾರೆ.
ಈ ಬಾರಿ ವರ್ಷವಿಡೀ ಮಳೆಯ ಪ್ರಭಾವ ಇತ್ತು. ಮೇ ತಿಂಗಳ ಕೊನೆಯಲ್ಲಿಯೇ ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆ ಕೆಲವರಿಗೆ ಸಾಧ್ಯವಾಗಿತ್ತು. ಜೂನ್ ತಿಂಗಳಲ್ಲಿ ಮಳೆಯ ಪ್ರಭಾವ ಸ್ವಲ್ಪ ಕಡಿಮೆ ಇದ್ದರೂ ಆ ಬಳಿಕ ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಮಲೆನಾಡು ಭಾಗವಾದ ಅದರಲ್ಲೂ ಸುಳ್ಯ, ಕಡಬ, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೊಳೆರೋಗ ಬಾಧಿಸಿದೆ. ಆದರೆ ಭಾರೀ ಪ್ರಮಾಣದಲ್ಲಿ ಕೊಳೆರೋಗ ಎಂದು ಹೇಳುವಷ್ಟು ಈ ಬಾರಿ ಇಲ್ಲದೇ ಇದ್ದರೂ ಕೆಲವು ಬೆಳೆಗಾರರ ತೋಟದಲ್ಲಿ ವಿಪರೀತವಾಗಿ ಕಂಡುಬಂದಿದೆ. ಇದರ ನಿಯಂತ್ರಣಕ್ಕೆ ಸರ್ಕಸ್ ಮಾಡುತ್ತಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…