ಶಿಥಿಲಾವಸ್ಥೆಯಿಂದ ಸಂಪೂರ್ಣ ಶಿಥಿಲಾವಸ್ಥೆಗೆ….! | ಕಟ್ಟ-ಕೊಲ್ಲಮೊಗ್ರ ಜನರ ಪಾಡು…! |

October 21, 2021
11:18 AM

ಅಭಿವೃದ್ಧಿ ನಿರಂತರ. ಯಾವತ್ತೂ  ಶಿಥಿಲದಿಂದ ಸುಧಾರಣೆಯ ಕಡೆಗೆ. ಆದರೆ ಗ್ರಾಮೀಣ ಭಾಗ ಕಟ್ಟ-ಕೊಲ್ಲಮೊಗ್ರ ಪ್ರದೇಶ ಜನರಿಗೆ ಹಾಗಲ್ಲ ಶಿಥಿಲದಿಂದ ಶಿಥಿಲಾವಸ್ಥೆ ಕಡೆಗೆ..!. ಬುಧವಾರದ ಮಳೆಗೆ ಇದ್ದ ಸೇತುವೆ ಕೊಚ್ಚಿ ಹೋಗಿ ಈ ಸ್ಥಿತಿ ಬಂದಿದೆ..!. ಘಟನೆ ಇದು.

ಸುಳ್ಯ ತಾಲೂಕಿನ ಕಟ್ಟ-ಕೊಲ್ಲಮೊಗ್ರ ಗ್ರಾಮೀಣ ಭಾಗ. ಕಾಡು ಹಾಗೂ ಶಿಥಿಲ ರಸ್ತೆಯ ಮೂಲಕ ಸಂಪರ್ಕ ಇರುವ ಊರು. ಇಲ್ಲಿ ಕಟ್ಟ – ಕೊಲ್ಲಮೊಗ್ರ ಮಾರ್ಗ ಮಧ್ಯೆ  ಮುಳುಗು ಸೇತುವೆ ಇದೆ. ಕಳೆದ ಸುಮಾರು ಆರು ವರ್ಷದಿಂದ ಸ್ವಲ್ಪ ಸ್ವಲ್ಪ ಶಿಥಿಲಾವಸ್ಥೆಯಿಂದ ಕೂಡಿತ್ತು. ಬುಧವಾರ ಸುರಿದ ಮಳೆಗೆ ಇದ್ದ ಸೇತುವೆಯೂ ಸಂಪೂರ್ಣವಾಗಿ ಶಿಥಿಲಗೊಂಡಿದೆ. 

ಈ ಹಿಂದೆ ದ್ವಿಚಕ್ರ ವಾಹನ ಸವಾರರು ದಾಟುತ್ತಿದ್ದು ಈಗ ದ್ವಿಚಕ್ರವಾಹನಕ್ಕೂ ಸವಾರಿ ಕಷ್ಟವಾಗಿದೆ. ಪಾದಾಚಾರಿಗಳಿಗೆ ಮಾತ್ರಾ ಹೋಗುವ ಸ್ಥಿತಿಗೆ ಬಂದಿದೆ. ಆಡಳಿತವು ಈ ಕಡೆಗೆ ಗಮನಹರಿಸಬೇಕಿದೆ. ಗ್ರಾಮೀಣ ಭಾಗದಲ್ಲಿ  ಇಂತಹ ಸೇತುವೆಗಳು ಸಂಪರ್ಕದ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುತ್ತದೆ. ಅತೀ ಅಗತ್ಯವಾಗಿ ದುರಸ್ತಿ ಆಗಬೇಕಿದೆ ಎಂಬುದು ಜನರ ಒತ್ತಾಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror