ಅಭಿವೃದ್ಧಿ ನಿರಂತರ. ಯಾವತ್ತೂ ಶಿಥಿಲದಿಂದ ಸುಧಾರಣೆಯ ಕಡೆಗೆ. ಆದರೆ ಗ್ರಾಮೀಣ ಭಾಗ ಕಟ್ಟ-ಕೊಲ್ಲಮೊಗ್ರ ಪ್ರದೇಶ ಜನರಿಗೆ ಹಾಗಲ್ಲ ಶಿಥಿಲದಿಂದ ಶಿಥಿಲಾವಸ್ಥೆ ಕಡೆಗೆ..!. ಬುಧವಾರದ ಮಳೆಗೆ ಇದ್ದ ಸೇತುವೆ ಕೊಚ್ಚಿ ಹೋಗಿ ಈ ಸ್ಥಿತಿ ಬಂದಿದೆ..!. ಘಟನೆ ಇದು.
ಸುಳ್ಯ ತಾಲೂಕಿನ ಕಟ್ಟ-ಕೊಲ್ಲಮೊಗ್ರ ಗ್ರಾಮೀಣ ಭಾಗ. ಕಾಡು ಹಾಗೂ ಶಿಥಿಲ ರಸ್ತೆಯ ಮೂಲಕ ಸಂಪರ್ಕ ಇರುವ ಊರು. ಇಲ್ಲಿ ಕಟ್ಟ – ಕೊಲ್ಲಮೊಗ್ರ ಮಾರ್ಗ ಮಧ್ಯೆ ಮುಳುಗು ಸೇತುವೆ ಇದೆ. ಕಳೆದ ಸುಮಾರು ಆರು ವರ್ಷದಿಂದ ಸ್ವಲ್ಪ ಸ್ವಲ್ಪ ಶಿಥಿಲಾವಸ್ಥೆಯಿಂದ ಕೂಡಿತ್ತು. ಬುಧವಾರ ಸುರಿದ ಮಳೆಗೆ ಇದ್ದ ಸೇತುವೆಯೂ ಸಂಪೂರ್ಣವಾಗಿ ಶಿಥಿಲಗೊಂಡಿದೆ.
ಈ ಹಿಂದೆ ದ್ವಿಚಕ್ರ ವಾಹನ ಸವಾರರು ದಾಟುತ್ತಿದ್ದು ಈಗ ದ್ವಿಚಕ್ರವಾಹನಕ್ಕೂ ಸವಾರಿ ಕಷ್ಟವಾಗಿದೆ. ಪಾದಾಚಾರಿಗಳಿಗೆ ಮಾತ್ರಾ ಹೋಗುವ ಸ್ಥಿತಿಗೆ ಬಂದಿದೆ. ಆಡಳಿತವು ಈ ಕಡೆಗೆ ಗಮನಹರಿಸಬೇಕಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಸೇತುವೆಗಳು ಸಂಪರ್ಕದ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುತ್ತದೆ. ಅತೀ ಅಗತ್ಯವಾಗಿ ದುರಸ್ತಿ ಆಗಬೇಕಿದೆ ಎಂಬುದು ಜನರ ಒತ್ತಾಯ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…