ಅಭಿವೃದ್ಧಿ ನಿರಂತರ. ಯಾವತ್ತೂ ಶಿಥಿಲದಿಂದ ಸುಧಾರಣೆಯ ಕಡೆಗೆ. ಆದರೆ ಗ್ರಾಮೀಣ ಭಾಗ ಕಟ್ಟ-ಕೊಲ್ಲಮೊಗ್ರ ಪ್ರದೇಶ ಜನರಿಗೆ ಹಾಗಲ್ಲ ಶಿಥಿಲದಿಂದ ಶಿಥಿಲಾವಸ್ಥೆ ಕಡೆಗೆ..!. ಬುಧವಾರದ ಮಳೆಗೆ ಇದ್ದ ಸೇತುವೆ ಕೊಚ್ಚಿ ಹೋಗಿ ಈ ಸ್ಥಿತಿ ಬಂದಿದೆ..!. ಘಟನೆ ಇದು.
ಸುಳ್ಯ ತಾಲೂಕಿನ ಕಟ್ಟ-ಕೊಲ್ಲಮೊಗ್ರ ಗ್ರಾಮೀಣ ಭಾಗ. ಕಾಡು ಹಾಗೂ ಶಿಥಿಲ ರಸ್ತೆಯ ಮೂಲಕ ಸಂಪರ್ಕ ಇರುವ ಊರು. ಇಲ್ಲಿ ಕಟ್ಟ – ಕೊಲ್ಲಮೊಗ್ರ ಮಾರ್ಗ ಮಧ್ಯೆ ಮುಳುಗು ಸೇತುವೆ ಇದೆ. ಕಳೆದ ಸುಮಾರು ಆರು ವರ್ಷದಿಂದ ಸ್ವಲ್ಪ ಸ್ವಲ್ಪ ಶಿಥಿಲಾವಸ್ಥೆಯಿಂದ ಕೂಡಿತ್ತು. ಬುಧವಾರ ಸುರಿದ ಮಳೆಗೆ ಇದ್ದ ಸೇತುವೆಯೂ ಸಂಪೂರ್ಣವಾಗಿ ಶಿಥಿಲಗೊಂಡಿದೆ.
ಈ ಹಿಂದೆ ದ್ವಿಚಕ್ರ ವಾಹನ ಸವಾರರು ದಾಟುತ್ತಿದ್ದು ಈಗ ದ್ವಿಚಕ್ರವಾಹನಕ್ಕೂ ಸವಾರಿ ಕಷ್ಟವಾಗಿದೆ. ಪಾದಾಚಾರಿಗಳಿಗೆ ಮಾತ್ರಾ ಹೋಗುವ ಸ್ಥಿತಿಗೆ ಬಂದಿದೆ. ಆಡಳಿತವು ಈ ಕಡೆಗೆ ಗಮನಹರಿಸಬೇಕಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಸೇತುವೆಗಳು ಸಂಪರ್ಕದ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುತ್ತದೆ. ಅತೀ ಅಗತ್ಯವಾಗಿ ದುರಸ್ತಿ ಆಗಬೇಕಿದೆ ಎಂಬುದು ಜನರ ಒತ್ತಾಯ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…