ಅಭಿವೃದ್ಧಿ ನಿರಂತರ. ಯಾವತ್ತೂ ಶಿಥಿಲದಿಂದ ಸುಧಾರಣೆಯ ಕಡೆಗೆ. ಆದರೆ ಗ್ರಾಮೀಣ ಭಾಗ ಕಟ್ಟ-ಕೊಲ್ಲಮೊಗ್ರ ಪ್ರದೇಶ ಜನರಿಗೆ ಹಾಗಲ್ಲ ಶಿಥಿಲದಿಂದ ಶಿಥಿಲಾವಸ್ಥೆ ಕಡೆಗೆ..!. ಬುಧವಾರದ ಮಳೆಗೆ ಇದ್ದ ಸೇತುವೆ ಕೊಚ್ಚಿ ಹೋಗಿ ಈ ಸ್ಥಿತಿ ಬಂದಿದೆ..!. ಘಟನೆ ಇದು.
ಸುಳ್ಯ ತಾಲೂಕಿನ ಕಟ್ಟ-ಕೊಲ್ಲಮೊಗ್ರ ಗ್ರಾಮೀಣ ಭಾಗ. ಕಾಡು ಹಾಗೂ ಶಿಥಿಲ ರಸ್ತೆಯ ಮೂಲಕ ಸಂಪರ್ಕ ಇರುವ ಊರು. ಇಲ್ಲಿ ಕಟ್ಟ – ಕೊಲ್ಲಮೊಗ್ರ ಮಾರ್ಗ ಮಧ್ಯೆ ಮುಳುಗು ಸೇತುವೆ ಇದೆ. ಕಳೆದ ಸುಮಾರು ಆರು ವರ್ಷದಿಂದ ಸ್ವಲ್ಪ ಸ್ವಲ್ಪ ಶಿಥಿಲಾವಸ್ಥೆಯಿಂದ ಕೂಡಿತ್ತು. ಬುಧವಾರ ಸುರಿದ ಮಳೆಗೆ ಇದ್ದ ಸೇತುವೆಯೂ ಸಂಪೂರ್ಣವಾಗಿ ಶಿಥಿಲಗೊಂಡಿದೆ.
ಈ ಹಿಂದೆ ದ್ವಿಚಕ್ರ ವಾಹನ ಸವಾರರು ದಾಟುತ್ತಿದ್ದು ಈಗ ದ್ವಿಚಕ್ರವಾಹನಕ್ಕೂ ಸವಾರಿ ಕಷ್ಟವಾಗಿದೆ. ಪಾದಾಚಾರಿಗಳಿಗೆ ಮಾತ್ರಾ ಹೋಗುವ ಸ್ಥಿತಿಗೆ ಬಂದಿದೆ. ಆಡಳಿತವು ಈ ಕಡೆಗೆ ಗಮನಹರಿಸಬೇಕಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಸೇತುವೆಗಳು ಸಂಪರ್ಕದ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುತ್ತದೆ. ಅತೀ ಅಗತ್ಯವಾಗಿ ದುರಸ್ತಿ ಆಗಬೇಕಿದೆ ಎಂಬುದು ಜನರ ಒತ್ತಾಯ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…