ಅಭಿವೃದ್ಧಿ ನಿರಂತರ. ಯಾವತ್ತೂ ಶಿಥಿಲದಿಂದ ಸುಧಾರಣೆಯ ಕಡೆಗೆ. ಆದರೆ ಗ್ರಾಮೀಣ ಭಾಗ ಕಟ್ಟ-ಕೊಲ್ಲಮೊಗ್ರ ಪ್ರದೇಶ ಜನರಿಗೆ ಹಾಗಲ್ಲ ಶಿಥಿಲದಿಂದ ಶಿಥಿಲಾವಸ್ಥೆ ಕಡೆಗೆ..!. ಬುಧವಾರದ ಮಳೆಗೆ ಇದ್ದ ಸೇತುವೆ ಕೊಚ್ಚಿ ಹೋಗಿ ಈ ಸ್ಥಿತಿ ಬಂದಿದೆ..!. ಘಟನೆ ಇದು.
ಸುಳ್ಯ ತಾಲೂಕಿನ ಕಟ್ಟ-ಕೊಲ್ಲಮೊಗ್ರ ಗ್ರಾಮೀಣ ಭಾಗ. ಕಾಡು ಹಾಗೂ ಶಿಥಿಲ ರಸ್ತೆಯ ಮೂಲಕ ಸಂಪರ್ಕ ಇರುವ ಊರು. ಇಲ್ಲಿ ಕಟ್ಟ – ಕೊಲ್ಲಮೊಗ್ರ ಮಾರ್ಗ ಮಧ್ಯೆ ಮುಳುಗು ಸೇತುವೆ ಇದೆ. ಕಳೆದ ಸುಮಾರು ಆರು ವರ್ಷದಿಂದ ಸ್ವಲ್ಪ ಸ್ವಲ್ಪ ಶಿಥಿಲಾವಸ್ಥೆಯಿಂದ ಕೂಡಿತ್ತು. ಬುಧವಾರ ಸುರಿದ ಮಳೆಗೆ ಇದ್ದ ಸೇತುವೆಯೂ ಸಂಪೂರ್ಣವಾಗಿ ಶಿಥಿಲಗೊಂಡಿದೆ.
ಈ ಹಿಂದೆ ದ್ವಿಚಕ್ರ ವಾಹನ ಸವಾರರು ದಾಟುತ್ತಿದ್ದು ಈಗ ದ್ವಿಚಕ್ರವಾಹನಕ್ಕೂ ಸವಾರಿ ಕಷ್ಟವಾಗಿದೆ. ಪಾದಾಚಾರಿಗಳಿಗೆ ಮಾತ್ರಾ ಹೋಗುವ ಸ್ಥಿತಿಗೆ ಬಂದಿದೆ. ಆಡಳಿತವು ಈ ಕಡೆಗೆ ಗಮನಹರಿಸಬೇಕಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಸೇತುವೆಗಳು ಸಂಪರ್ಕದ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳುತ್ತದೆ. ಅತೀ ಅಗತ್ಯವಾಗಿ ದುರಸ್ತಿ ಆಗಬೇಕಿದೆ ಎಂಬುದು ಜನರ ಒತ್ತಾಯ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…