Advertisement
ಸುದ್ದಿಗಳು

ಕೊಂಕಣಿ ಪ್ರಶಸ್ತಿಗೆ ಲೇಖಕಿ ಐರಿನ್ ಪಿಂಟೊ ಅವರು ಆಯ್ಕೆ

Share

ಕೊಂಕಣಿ ಲೇಖಕರ ಸಂಘವು ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರಿಗೆ ನೀಡುವ ಪ್ರಶಸ್ತಿಗೆ 2022ನೇ ಸಾಲಿನಲ್ಲಿ ಲೇಖಕಿ ಐರಿನ್ ಪಿಂಟೊ ಅವರನ್ನು ಆಯ್ಕೆ ಮಾಡಿದೆ ಎಂದು ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚರ್ಡ್ ಮೊರಾಸ್ ಅವರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಫೆ.25ರಂದು ಸಂಜೆ 6:30 ಕ್ಕೆ ಮಂಗಳೂರು ನಂತೂರು ಬಜ್ಜೋಡಿಯ ಸಂದೇಶ ಪ್ರತಿಷ್ಠಾನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಐರಿನ್ ಪಿಂಟೊ ಕೊಂಕಣಿ ಭಾಷೆಯಲ್ಲಿ ಸಣ್ಣ ಕಥೆ, ಪುಸ್ತಕ, ಧಾರಾವಾಹಿ, ಆಕಾಶವಾಣಿಯಲ್ಲಿ ಸಂದರ್ಶನದ ಮೂಲಕ ಭಾಷೆಗೆ ಕೊಡುಗೆ ನೀಡಿದ್ದಾರೆ. ಸಾಕಷ್ಟು ಪ್ರಶಸ್ತಿಗಳಿಗೂ ಪಾತ್ರರಾಗಿದ್ದಾರೆ ಎಂದು ರಿಚರ್ಡ್ ಮೊರಾಸ್ ತಿಳಿಸಿದ್ದಾರೆ.

‘ರಾಕ್ಣೊ’ ಕೊಂಕಣಿ ವಾರ ಪತ್ರಿಕೆಯ ಮಾಜಿ ಸಂಪಾದಕ ಫಾದರ್ ಫ್ರಾನ್ಸಿಸ್ ರೊಡ್ರಿಗಸ್, ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ರಾಧಾಕೃಷ್ಣ ಎನ್.ಬೆಳ್ಳೂರ್ ಮುಖ್ಯ ಅತಿಥಿಯಾಗಿರುವರು. ಕೊಂಕಣಿ ಲೇಖಕರ ಸಂಘ ಕರ್ನಾಟಕ ಕೊಂಕಣಿ ಭಾಷೆ ಮತ್ತು ಸಾಹಿತ್ಯ ವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018 ರಲ್ಲಿ ಆರಂಭಗೊಂಡಿತು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಸದಸ್ಯ ಡೊಲ್ಫಿ ಎಫ್.ಲೋಬೊ, ಸಲಹಾ ಸಮಿತಿ ಸದಸ್ಯರಾದ ಜೆ.ಎಫ್.ಡಿಸೋಜ, ಡಾ.ಜೆರಾಲ್ಡ್ ಪಿಂಟೊ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

19 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago