Advertisement
ಸುದ್ದಿಗಳು

ಕೊಂಕಣಿ ಪ್ರಶಸ್ತಿಗೆ ಲೇಖಕಿ ಐರಿನ್ ಪಿಂಟೊ ಅವರು ಆಯ್ಕೆ

Share

ಕೊಂಕಣಿ ಲೇಖಕರ ಸಂಘವು ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರಿಗೆ ನೀಡುವ ಪ್ರಶಸ್ತಿಗೆ 2022ನೇ ಸಾಲಿನಲ್ಲಿ ಲೇಖಕಿ ಐರಿನ್ ಪಿಂಟೊ ಅವರನ್ನು ಆಯ್ಕೆ ಮಾಡಿದೆ ಎಂದು ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚರ್ಡ್ ಮೊರಾಸ್ ಅವರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಫೆ.25ರಂದು ಸಂಜೆ 6:30 ಕ್ಕೆ ಮಂಗಳೂರು ನಂತೂರು ಬಜ್ಜೋಡಿಯ ಸಂದೇಶ ಪ್ರತಿಷ್ಠಾನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಐರಿನ್ ಪಿಂಟೊ ಕೊಂಕಣಿ ಭಾಷೆಯಲ್ಲಿ ಸಣ್ಣ ಕಥೆ, ಪುಸ್ತಕ, ಧಾರಾವಾಹಿ, ಆಕಾಶವಾಣಿಯಲ್ಲಿ ಸಂದರ್ಶನದ ಮೂಲಕ ಭಾಷೆಗೆ ಕೊಡುಗೆ ನೀಡಿದ್ದಾರೆ. ಸಾಕಷ್ಟು ಪ್ರಶಸ್ತಿಗಳಿಗೂ ಪಾತ್ರರಾಗಿದ್ದಾರೆ ಎಂದು ರಿಚರ್ಡ್ ಮೊರಾಸ್ ತಿಳಿಸಿದ್ದಾರೆ.

‘ರಾಕ್ಣೊ’ ಕೊಂಕಣಿ ವಾರ ಪತ್ರಿಕೆಯ ಮಾಜಿ ಸಂಪಾದಕ ಫಾದರ್ ಫ್ರಾನ್ಸಿಸ್ ರೊಡ್ರಿಗಸ್, ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ರಾಧಾಕೃಷ್ಣ ಎನ್.ಬೆಳ್ಳೂರ್ ಮುಖ್ಯ ಅತಿಥಿಯಾಗಿರುವರು. ಕೊಂಕಣಿ ಲೇಖಕರ ಸಂಘ ಕರ್ನಾಟಕ ಕೊಂಕಣಿ ಭಾಷೆ ಮತ್ತು ಸಾಹಿತ್ಯ ವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018 ರಲ್ಲಿ ಆರಂಭಗೊಂಡಿತು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಸದಸ್ಯ ಡೊಲ್ಫಿ ಎಫ್.ಲೋಬೊ, ಸಲಹಾ ಸಮಿತಿ ಸದಸ್ಯರಾದ ಜೆ.ಎಫ್.ಡಿಸೋಜ, ಡಾ.ಜೆರಾಲ್ಡ್ ಪಿಂಟೊ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

5 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

13 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago