Advertisement
ಸುದ್ದಿಗಳು

ಕೊಂಕಣಿ ಪ್ರಶಸ್ತಿಗೆ ಲೇಖಕಿ ಐರಿನ್ ಪಿಂಟೊ ಅವರು ಆಯ್ಕೆ

Share

ಕೊಂಕಣಿ ಲೇಖಕರ ಸಂಘವು ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರಿಗೆ ನೀಡುವ ಪ್ರಶಸ್ತಿಗೆ 2022ನೇ ಸಾಲಿನಲ್ಲಿ ಲೇಖಕಿ ಐರಿನ್ ಪಿಂಟೊ ಅವರನ್ನು ಆಯ್ಕೆ ಮಾಡಿದೆ ಎಂದು ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚರ್ಡ್ ಮೊರಾಸ್ ಅವರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಫೆ.25ರಂದು ಸಂಜೆ 6:30 ಕ್ಕೆ ಮಂಗಳೂರು ನಂತೂರು ಬಜ್ಜೋಡಿಯ ಸಂದೇಶ ಪ್ರತಿಷ್ಠಾನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಐರಿನ್ ಪಿಂಟೊ ಕೊಂಕಣಿ ಭಾಷೆಯಲ್ಲಿ ಸಣ್ಣ ಕಥೆ, ಪುಸ್ತಕ, ಧಾರಾವಾಹಿ, ಆಕಾಶವಾಣಿಯಲ್ಲಿ ಸಂದರ್ಶನದ ಮೂಲಕ ಭಾಷೆಗೆ ಕೊಡುಗೆ ನೀಡಿದ್ದಾರೆ. ಸಾಕಷ್ಟು ಪ್ರಶಸ್ತಿಗಳಿಗೂ ಪಾತ್ರರಾಗಿದ್ದಾರೆ ಎಂದು ರಿಚರ್ಡ್ ಮೊರಾಸ್ ತಿಳಿಸಿದ್ದಾರೆ.

‘ರಾಕ್ಣೊ’ ಕೊಂಕಣಿ ವಾರ ಪತ್ರಿಕೆಯ ಮಾಜಿ ಸಂಪಾದಕ ಫಾದರ್ ಫ್ರಾನ್ಸಿಸ್ ರೊಡ್ರಿಗಸ್, ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ರಾಧಾಕೃಷ್ಣ ಎನ್.ಬೆಳ್ಳೂರ್ ಮುಖ್ಯ ಅತಿಥಿಯಾಗಿರುವರು. ಕೊಂಕಣಿ ಲೇಖಕರ ಸಂಘ ಕರ್ನಾಟಕ ಕೊಂಕಣಿ ಭಾಷೆ ಮತ್ತು ಸಾಹಿತ್ಯ ವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018 ರಲ್ಲಿ ಆರಂಭಗೊಂಡಿತು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಸದಸ್ಯ ಡೊಲ್ಫಿ ಎಫ್.ಲೋಬೊ, ಸಲಹಾ ಸಮಿತಿ ಸದಸ್ಯರಾದ ಜೆ.ಎಫ್.ಡಿಸೋಜ, ಡಾ.ಜೆರಾಲ್ಡ್ ಪಿಂಟೊ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

14 minutes ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

20 minutes ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

8 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

8 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago