Advertisement
MIRROR FOCUS

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

Share

ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯನ್ನು ತಡೆಯಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಅರಣ್ಯ ವಿಭಾಗ ವ್ಯಾಪ್ತಿಯಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದ್ದಾರೆ.

ನರಸಿಂಹರಾಜಪುರದಲ್ಲಿ ಮಾತನಾಡಿದ ಅವರು, ಈ ಯೋಜನೆಗಾಗಿ ₹12 ಕೋಟಿ 77 ಲಕ್ಷ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದರು. ಇತ್ತೀಚೆಗೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಚಲನೆ ಹಾಗೂ ಹಾವಳಿ ಹೆಚ್ಚಾಗಿದ್ದು, ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಕಾಡಿನಿಂದ ಗ್ರಾಮಗಳಿಗೆ ಕಾಡಾನೆಗಳು ನುಗ್ಗದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ವ್ಯವಸ್ಥೆ ಅಳವಡಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆಯಡಿ ನರಸಿಂಹರಾಜಪುರ, ಬಾಳೆಹೊನ್ನೂರು ಹಾಗೂ ಚಿಕ್ಕ ಅಗ್ರಹಾರ ಭಾಗಗಳಲ್ಲಿ ಬ್ಯಾರಿಕೇಡ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಈ ಕ್ರಮದಿಂದ ಕಾಡಾನೆಗಳು ಗ್ರಾಮ ಪ್ರದೇಶಗಳಿಗೆ ಪ್ರವೇಶಿಸುವುದನ್ನು ಕಡಿಮೆ ಮಾಡುವುದರ ಜೊತೆಗೆ ರೈತರ ಬೆಳೆ ನಷ್ಟ ಹಾಗೂ ಮಾನವ–ಆನೆ ಸಂಘರ್ಷವನ್ನು ನಿಯಂತ್ರಿಸಲು ಸಹಾಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka government has approved ₹12.77 crore for installing railway barricades in the Koppa forest division of Chikkamagaluru district to prevent elephants from entering human settlements. The barricades will be installed in Narasimharajapura, Balehonnur and Chikka Agrahara areas to reduce human-elephant conflict.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 hour ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

13 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

23 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

1 day ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

2 days ago