Advertisement
MIRROR FOCUS

ತೆಂಗಿನಕಾಯಿ ಕತ್ತರಿಸುವ ‘ಕೋಪ್ರಾ ಬ್ರೇಕರ್’

Share

“ಕೃಷಿಕಾವಿಷ್ಕಾರಗಳು ಶ್ರಮವನ್ನು ಹಗುರ ಮಾಡುವಲ್ಲಿ ದೊಡ್ಡ ಕೊಡುಗೆ ನೀಡಿದೆ. ಮನೆಮಟ್ಟದ ಕಿರು ಉದ್ಯಮಗಳ ಅಭಿವೃದ್ಧಿಗೆ ಚಿಕ್ಕ ಪುಟ್ಟ ಸಾಧನ, ಯಂತ್ರಗಳು ನೆರವಾಗಿವೆ. ಬದಲಾದ ತಂತ್ರಜ್ಞಾನದ ಹಿನ್ನೆಲೆಯಲ್ಲಿ ರೈತ ಮಟ್ಟದ ಆವಿಷ್ಕಾರಗಳು ಕೃಷಿಯಲ್ಲಿ ವೆಚ್ಚವನ್ನು ಕಡಿಮೆಗೊಳಿಸಬಲ್ಲುದು. ಅಲ್ಲದೆ ಸ್ಥಳೀಯವಾಗಿ ಸಿದ್ಧವಾಗುವ ಉತ್ಪನ್ನಗಳು ಆತ್ಮ ನಿರ್ಭರ ಭಾರತದ ಆಶಯವನ್ನು ಸಾಕಾರಗೊಳಿಸುತ್ತದೆ.” ಎಂದು ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂ.ನಾ.ಖಂಡಿಗೆ ಅಭಿಪ್ರಾಯ ಪಟ್ಟರು.

ಅವರು ಏಳ್ಮುಡಿಯ ಮರಿಕೆ ಸಾವಯವ ಮಳಿಗೆಯಲ್ಲಿ ಜರುಗಿದ ಕೃಷಿಕ ಅನಂತಪ್ರಸಾದ್ ನೈತ್ತಡ್ಕ ಆವಿಷ್ಕಾರ ಮಾಡಿದ ‘ಕೋಪ್ರಾ ಬ್ರೇಕರ್’ ಸಾಧನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ, “ತೆಂಗಿನ ಕಿರು ಉದ್ಯಮದ ಆಭಿವೃದ್ಧಿಗೆ ಈ ಸಾಧನ ತುಂಬಾ ಸಹಕಾರಿ.” ಎಂದರು. ಕೃಷಿಕ ತಂತ್ರಜ್ಞ ಶ್ಯಾಮಸುಂದರ ಭಟ್ ಬಟ್ಯಡ್ಕ ಶುಭಾಶಂಸನೆ ಮಾಡಿದರು.

ಅಕ್ಷ ಆರ್ಗಾನಿಕ್ಸ್ ಮತ್ತು ಹೌಸ್‍ಹೋಲ್ಡ್ ಅಪ್ಲಾಯನ್ಸನ್ ಸಂಸ್ಥೆಯ ಅನಂತಪ್ರಸಾದ್ ನೈತ್ತಡ್ಕ ಇವರು ತೆಂಗು ಇಬ್ಭಾಗಿಸುವ ‘ಕೋಪ್ರಾ ಬ್ರೇಕರ್’ ಸಾಧನದ ಕಾರ್ಯಕ್ಷಮತೆಯನ್ನು ವಿವರಿಸಿ ಸ್ವಾಗತಿಸಿದರು.

ಲೇಖಕ, ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಸುಹಾಸ ಎ.ಪಿ.ಮರಿಕೆ ವಂದಿಸಿದರು.
ಸಮಾರಂಭದಲ್ಲಿ ವೇಣುಗೋಪಾಲ ಶಿಬರ, ಎ.ಪಿ.ಸದಾಶಿವ ಮರಿಕೆ, ಅಕ್ಷತಾ, ಅಕ್ಷಯರಾಮ, ತೇಜಸ್ವಿನಿ ಉಪಸ್ಥಿತರಿದ್ದರು.

(ಚಿತ್ರ : ಚೇತನ ಸ್ಟುಡಿಯೋ ಪುತ್ತೂರು)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

16 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

3 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago