MIRROR FOCUS

ತೆಂಗಿನಕಾಯಿ ಕತ್ತರಿಸುವ ‘ಕೋಪ್ರಾ ಬ್ರೇಕರ್’

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

“ಕೃಷಿಕಾವಿಷ್ಕಾರಗಳು ಶ್ರಮವನ್ನು ಹಗುರ ಮಾಡುವಲ್ಲಿ ದೊಡ್ಡ ಕೊಡುಗೆ ನೀಡಿದೆ. ಮನೆಮಟ್ಟದ ಕಿರು ಉದ್ಯಮಗಳ ಅಭಿವೃದ್ಧಿಗೆ ಚಿಕ್ಕ ಪುಟ್ಟ ಸಾಧನ, ಯಂತ್ರಗಳು ನೆರವಾಗಿವೆ. ಬದಲಾದ ತಂತ್ರಜ್ಞಾನದ ಹಿನ್ನೆಲೆಯಲ್ಲಿ ರೈತ ಮಟ್ಟದ ಆವಿಷ್ಕಾರಗಳು ಕೃಷಿಯಲ್ಲಿ ವೆಚ್ಚವನ್ನು ಕಡಿಮೆಗೊಳಿಸಬಲ್ಲುದು. ಅಲ್ಲದೆ ಸ್ಥಳೀಯವಾಗಿ ಸಿದ್ಧವಾಗುವ ಉತ್ಪನ್ನಗಳು ಆತ್ಮ ನಿರ್ಭರ ಭಾರತದ ಆಶಯವನ್ನು ಸಾಕಾರಗೊಳಿಸುತ್ತದೆ.” ಎಂದು ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂ.ನಾ.ಖಂಡಿಗೆ ಅಭಿಪ್ರಾಯ ಪಟ್ಟರು.

Advertisement

ಅವರು ಏಳ್ಮುಡಿಯ ಮರಿಕೆ ಸಾವಯವ ಮಳಿಗೆಯಲ್ಲಿ ಜರುಗಿದ ಕೃಷಿಕ ಅನಂತಪ್ರಸಾದ್ ನೈತ್ತಡ್ಕ ಆವಿಷ್ಕಾರ ಮಾಡಿದ ‘ಕೋಪ್ರಾ ಬ್ರೇಕರ್’ ಸಾಧನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ, “ತೆಂಗಿನ ಕಿರು ಉದ್ಯಮದ ಆಭಿವೃದ್ಧಿಗೆ ಈ ಸಾಧನ ತುಂಬಾ ಸಹಕಾರಿ.” ಎಂದರು. ಕೃಷಿಕ ತಂತ್ರಜ್ಞ ಶ್ಯಾಮಸುಂದರ ಭಟ್ ಬಟ್ಯಡ್ಕ ಶುಭಾಶಂಸನೆ ಮಾಡಿದರು.

ಅಕ್ಷ ಆರ್ಗಾನಿಕ್ಸ್ ಮತ್ತು ಹೌಸ್‍ಹೋಲ್ಡ್ ಅಪ್ಲಾಯನ್ಸನ್ ಸಂಸ್ಥೆಯ ಅನಂತಪ್ರಸಾದ್ ನೈತ್ತಡ್ಕ ಇವರು ತೆಂಗು ಇಬ್ಭಾಗಿಸುವ ‘ಕೋಪ್ರಾ ಬ್ರೇಕರ್’ ಸಾಧನದ ಕಾರ್ಯಕ್ಷಮತೆಯನ್ನು ವಿವರಿಸಿ ಸ್ವಾಗತಿಸಿದರು.

ಲೇಖಕ, ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಸುಹಾಸ ಎ.ಪಿ.ಮರಿಕೆ ವಂದಿಸಿದರು.
ಸಮಾರಂಭದಲ್ಲಿ ವೇಣುಗೋಪಾಲ ಶಿಬರ, ಎ.ಪಿ.ಸದಾಶಿವ ಮರಿಕೆ, ಅಕ್ಷತಾ, ಅಕ್ಷಯರಾಮ, ತೇಜಸ್ವಿನಿ ಉಪಸ್ಥಿತರಿದ್ದರು.

(ಚಿತ್ರ : ಚೇತನ ಸ್ಟುಡಿಯೋ ಪುತ್ತೂರು)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

2 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

11 hours ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

12 hours ago

ಮನೆಗೆ 4 ರಿಂದ 6 ಬಾಗಿಲುಗಳು ಇದ್ದರೆ ಏನೆಲ್ಲಾ ಪ್ರಯೋಜನಗಳಿವೆ ..? ಹೀಗಿವೆ ಶುಭ, ಅಶುಭ ಫಲಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಆರೋಪ | ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ…

24 hours ago

ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ

ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ…

24 hours ago