“ಕೃಷಿಕಾವಿಷ್ಕಾರಗಳು ಶ್ರಮವನ್ನು ಹಗುರ ಮಾಡುವಲ್ಲಿ ದೊಡ್ಡ ಕೊಡುಗೆ ನೀಡಿದೆ. ಮನೆಮಟ್ಟದ ಕಿರು ಉದ್ಯಮಗಳ ಅಭಿವೃದ್ಧಿಗೆ ಚಿಕ್ಕ ಪುಟ್ಟ ಸಾಧನ, ಯಂತ್ರಗಳು ನೆರವಾಗಿವೆ. ಬದಲಾದ ತಂತ್ರಜ್ಞಾನದ ಹಿನ್ನೆಲೆಯಲ್ಲಿ ರೈತ ಮಟ್ಟದ ಆವಿಷ್ಕಾರಗಳು ಕೃಷಿಯಲ್ಲಿ ವೆಚ್ಚವನ್ನು ಕಡಿಮೆಗೊಳಿಸಬಲ್ಲುದು. ಅಲ್ಲದೆ ಸ್ಥಳೀಯವಾಗಿ ಸಿದ್ಧವಾಗುವ ಉತ್ಪನ್ನಗಳು ಆತ್ಮ ನಿರ್ಭರ ಭಾರತದ ಆಶಯವನ್ನು ಸಾಕಾರಗೊಳಿಸುತ್ತದೆ.” ಎಂದು ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂ.ನಾ.ಖಂಡಿಗೆ ಅಭಿಪ್ರಾಯ ಪಟ್ಟರು.
ಅವರು ಏಳ್ಮುಡಿಯ ಮರಿಕೆ ಸಾವಯವ ಮಳಿಗೆಯಲ್ಲಿ ಜರುಗಿದ ಕೃಷಿಕ ಅನಂತಪ್ರಸಾದ್ ನೈತ್ತಡ್ಕ ಆವಿಷ್ಕಾರ ಮಾಡಿದ ‘ಕೋಪ್ರಾ ಬ್ರೇಕರ್’ ಸಾಧನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ, “ತೆಂಗಿನ ಕಿರು ಉದ್ಯಮದ ಆಭಿವೃದ್ಧಿಗೆ ಈ ಸಾಧನ ತುಂಬಾ ಸಹಕಾರಿ.” ಎಂದರು. ಕೃಷಿಕ ತಂತ್ರಜ್ಞ ಶ್ಯಾಮಸುಂದರ ಭಟ್ ಬಟ್ಯಡ್ಕ ಶುಭಾಶಂಸನೆ ಮಾಡಿದರು.
ಅಕ್ಷ ಆರ್ಗಾನಿಕ್ಸ್ ಮತ್ತು ಹೌಸ್ಹೋಲ್ಡ್ ಅಪ್ಲಾಯನ್ಸನ್ ಸಂಸ್ಥೆಯ ಅನಂತಪ್ರಸಾದ್ ನೈತ್ತಡ್ಕ ಇವರು ತೆಂಗು ಇಬ್ಭಾಗಿಸುವ ‘ಕೋಪ್ರಾ ಬ್ರೇಕರ್’ ಸಾಧನದ ಕಾರ್ಯಕ್ಷಮತೆಯನ್ನು ವಿವರಿಸಿ ಸ್ವಾಗತಿಸಿದರು.
ಲೇಖಕ, ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಸುಹಾಸ ಎ.ಪಿ.ಮರಿಕೆ ವಂದಿಸಿದರು.
ಸಮಾರಂಭದಲ್ಲಿ ವೇಣುಗೋಪಾಲ ಶಿಬರ, ಎ.ಪಿ.ಸದಾಶಿವ ಮರಿಕೆ, ಅಕ್ಷತಾ, ಅಕ್ಷಯರಾಮ, ತೇಜಸ್ವಿನಿ ಉಪಸ್ಥಿತರಿದ್ದರು.
(ಚಿತ್ರ : ಚೇತನ ಸ್ಟುಡಿಯೋ ಪುತ್ತೂರು)
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…