“ಕೃಷಿಕಾವಿಷ್ಕಾರಗಳು ಶ್ರಮವನ್ನು ಹಗುರ ಮಾಡುವಲ್ಲಿ ದೊಡ್ಡ ಕೊಡುಗೆ ನೀಡಿದೆ. ಮನೆಮಟ್ಟದ ಕಿರು ಉದ್ಯಮಗಳ ಅಭಿವೃದ್ಧಿಗೆ ಚಿಕ್ಕ ಪುಟ್ಟ ಸಾಧನ, ಯಂತ್ರಗಳು ನೆರವಾಗಿವೆ. ಬದಲಾದ ತಂತ್ರಜ್ಞಾನದ ಹಿನ್ನೆಲೆಯಲ್ಲಿ ರೈತ ಮಟ್ಟದ ಆವಿಷ್ಕಾರಗಳು ಕೃಷಿಯಲ್ಲಿ ವೆಚ್ಚವನ್ನು ಕಡಿಮೆಗೊಳಿಸಬಲ್ಲುದು. ಅಲ್ಲದೆ ಸ್ಥಳೀಯವಾಗಿ ಸಿದ್ಧವಾಗುವ ಉತ್ಪನ್ನಗಳು ಆತ್ಮ ನಿರ್ಭರ ಭಾರತದ ಆಶಯವನ್ನು ಸಾಕಾರಗೊಳಿಸುತ್ತದೆ.” ಎಂದು ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂ.ನಾ.ಖಂಡಿಗೆ ಅಭಿಪ್ರಾಯ ಪಟ್ಟರು.
ಅವರು ಏಳ್ಮುಡಿಯ ಮರಿಕೆ ಸಾವಯವ ಮಳಿಗೆಯಲ್ಲಿ ಜರುಗಿದ ಕೃಷಿಕ ಅನಂತಪ್ರಸಾದ್ ನೈತ್ತಡ್ಕ ಆವಿಷ್ಕಾರ ಮಾಡಿದ ‘ಕೋಪ್ರಾ ಬ್ರೇಕರ್’ ಸಾಧನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ, “ತೆಂಗಿನ ಕಿರು ಉದ್ಯಮದ ಆಭಿವೃದ್ಧಿಗೆ ಈ ಸಾಧನ ತುಂಬಾ ಸಹಕಾರಿ.” ಎಂದರು. ಕೃಷಿಕ ತಂತ್ರಜ್ಞ ಶ್ಯಾಮಸುಂದರ ಭಟ್ ಬಟ್ಯಡ್ಕ ಶುಭಾಶಂಸನೆ ಮಾಡಿದರು.
ಅಕ್ಷ ಆರ್ಗಾನಿಕ್ಸ್ ಮತ್ತು ಹೌಸ್ಹೋಲ್ಡ್ ಅಪ್ಲಾಯನ್ಸನ್ ಸಂಸ್ಥೆಯ ಅನಂತಪ್ರಸಾದ್ ನೈತ್ತಡ್ಕ ಇವರು ತೆಂಗು ಇಬ್ಭಾಗಿಸುವ ‘ಕೋಪ್ರಾ ಬ್ರೇಕರ್’ ಸಾಧನದ ಕಾರ್ಯಕ್ಷಮತೆಯನ್ನು ವಿವರಿಸಿ ಸ್ವಾಗತಿಸಿದರು.
ಲೇಖಕ, ಹವ್ಯಾಸಿ ಪತ್ರಕರ್ತ ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಸುಹಾಸ ಎ.ಪಿ.ಮರಿಕೆ ವಂದಿಸಿದರು.
ಸಮಾರಂಭದಲ್ಲಿ ವೇಣುಗೋಪಾಲ ಶಿಬರ, ಎ.ಪಿ.ಸದಾಶಿವ ಮರಿಕೆ, ಅಕ್ಷತಾ, ಅಕ್ಷಯರಾಮ, ತೇಜಸ್ವಿನಿ ಉಪಸ್ಥಿತರಿದ್ದರು.
(ಚಿತ್ರ : ಚೇತನ ಸ್ಟುಡಿಯೋ ಪುತ್ತೂರು)
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…