ಸರಕಾರಗಳು ಇವರ ಅಭಿವೃದ್ಧಿ ಯೋಜನೆಗಳನ್ನು ಹಾಕಿಕೊಂಡಿದೆ. ಆದರೂ ಸೌಲಭ್ಯಗಳು ಇನ್ನೂ ತಲಪುತ್ತಿಲ್ಲ. ದಾಖಲೆಗಳು ಹೇಳುತ್ತವೆ ಇವರು ಕ್ರೈಸ್ತರೆಂದು…!. ಇವರು ಸುಳ್ಯ ತಾಲೂಕಿನ ಪಂಜ ಪರಿಸರದಲ್ಲಿರುವ ಕೊರಗ ಸಮುದಾಯದ ಹಲವು ಕುಟುಂಬಗಳು ಇಂದಿಗೂ ಮೂಲಭೂತ ಸೌಲಭ್ಯದ ಕೊರತೆಯಿಂದ ಬಳಲುತ್ತಿವೆ. ಮಾನವೀಯ ನೆಲೆಯಲ್ಲಿ ಇವರಿಗೆ ಸೌಲಭ್ಯಗಳು ಈಗ ತಲುಪಬೇಕಿದೆ.
ಸೌಲಭ್ಯಕ್ಕಾಗಿ , ಮನೆ ನಿರ್ಮಾಣಕ್ಕಾಗಿ ಕಚೇರಿಗಳಿಗೆ ಅಲೆದೂ ಅಲೆದೂ ಈಗ ಕಚೇರಿ ಎಂದಾಗಲೇ ಇವರಲ್ಲಿ ಕೆಲವರಿಗೆ ಅಲರ್ಜಿ ಆಗಿದೆ. ನಮಗೇನು ಸಿಗಲ್ಲ ಎಂಬ ಭಾವನೆ ಇದೆ. ರಾಜಕೀಯ ಮುಖಂಡರೂ ಚುನಾವಣೆಯ ವೇಳೆಗೆ ಬರುತ್ತಾರೆ ಮತ್ತೆ ಈ ಕಡೆ ಬರಲ್ಲ ಎನ್ನುತ್ತಾರೆ.
ಆದರೆ ರಾಜಕೀಯ ಮುಖಂಡರು ಹೇಳುತ್ತಾರೆ, ಚುನಾವಣೆ ನಂತರ ಮನೆ ನಿರ್ಮಾಣ ಸೇರಿದಂತೆ ಮೂಲಭೂತ ಸೌಲಭ್ಯಕ್ಕಾಗಿ ಅವರನ್ನು ಕರೆದುಕೊಂಡು ಹೋದರೂ ಮತ್ತೆ ಬರಲ್ಲ, ಹೀಗಾಗಿ ಸೌಲಭ್ಯ ನೀಡುವುದಾದರೂ ಹೇಗೆ ಎಂದು ಹೇಳುತ್ತಾರೆ. ಮತಾಂತರ ಆಗಿರುವುದು ಒಂದು ಭಾಗವಾದರೆ, ಇನ್ನೂ ಮತಾಂತರ ಆಗದೇ ಇರುವವರಿಗೂ ಸೌಲಭ್ಯಗಳು ದೊರೆತಿಲ್ಲ, ಈಗಲೂ ದುಸ್ಥಿತಿಯಲ್ಲಿರುವ ಮನೆಯಲ್ಲಿ ಬದುಕುತ್ತಿದ್ದಾರೆ.
ಸದ್ಯ ಮತಾಂತರ ಆಗಿರಬಹುದು , ಕೆಲವರು ಹೆಸರುಗಳು ಬದಲಾಗಿರಬಹುದು , ಧರ್ಮ ಹಾಗೂ ಹೆಸರಿನ ದಾಖಲೆಗಳಲ್ಲಿ ಲೋಪ ಇರಬಹುದು, ಅದೇನೇ ಇದ್ದರೂ ಮಾನವೀಯತೆಯಿಂದ ಮೇಲಾದ್ದು ಯಾವುದೂ ಇಲ್ಲ. ಈಗ ಸರಕಾರಗಳು, ಇಲಾಖೆಗಳು, ರಾಜಕೀಯ ಮುಖಂಡರು ಮಾನವೀಯತೆಯ ಆಧಾರದಲ್ಲಿಯೇ ಇಲ್ಲಿನ ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ಕೆಲಸ ಆಗಬೇಕಿದೆ.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…