MIRROR FOCUS

ಮತಾಂತರದ ಕರಾಳ ಮುಖ | ಇವರಿಗೆ ಸೌಲಭ್ಯಗಳು ಮಾತ್ರಾ ಇನ್ನೂ ತಲುಪಿಲ್ಲ | ಈಗ ಅಡ್ಡಿಯಾಗಿರುವುದು ಧರ್ಮ….! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

Advertisement
Advertisement
ವಿಡಿಯೋ ಸ್ಟೋರಿ

ಸರಕಾರಗಳು ಇವರ ಅಭಿವೃದ್ಧಿ ಯೋಜನೆಗಳನ್ನು  ಹಾಕಿಕೊಂಡಿದೆ. ಆದರೂ ಸೌಲಭ್ಯಗಳು ಇನ್ನೂ ತಲಪುತ್ತಿಲ್ಲ. ದಾಖಲೆಗಳು ಹೇಳುತ್ತವೆ ಇವರು ಕ್ರೈಸ್ತರೆಂದು…!. ಇವರು ಸುಳ್ಯ ತಾಲೂಕಿನ ಪಂಜ ಪರಿಸರದಲ್ಲಿರುವ  ಕೊರಗ ಸಮುದಾಯದ ಹಲವು ಕುಟುಂಬಗಳು ಇಂದಿಗೂ ಮೂಲಭೂತ ಸೌಲಭ್ಯದ ಕೊರತೆಯಿಂದ ಬಳಲುತ್ತಿವೆ. ಮಾನವೀಯ ನೆಲೆಯಲ್ಲಿ  ಇವರಿಗೆ ಸೌಲಭ್ಯಗಳು ಈಗ ತಲುಪಬೇಕಿದೆ.

ಸುಳ್ಯ ತಾಲೂಕಿನ ಪಂಜದಲ್ಲಿ  ಕೊರಗ ಸಮುದಾಯದ ಹಲವು ಮನೆಗಳು ಇವೆ. ಸರಕಾರ ಎಲ್ಲಾ ವ್ಯವಸ್ಥೆ ಕಡೆಗೂ ಗಮನಕೊಟ್ಟರೂ ಈಗಲೂ ಮೂಲಭೂತ ಸಮಸ್ಯೆಗಳ ಕೊರತೆಯಿಂದ ಈ ಕುಟುಂಬಗಳು ಅನೇಕ ವರ್ಷಗಳಿಂದ ಬಳಲುತ್ತಿವೆ. ಈಗ ಯಾವುದೇ ಕಚೇರಿಗೆ ಈ ಕೊರಗ ಸಮುದಾಯದ ಕುಟುಂಬಗಳು ಸೌಲಭ್ಯಕ್ಕೆ ಹೋದಾಗ ದಾಖಲೆಗಳಲ್ಲಿ ಮತಾಂತರವಾದ ಬಗ್ಗೆ ಬೆಳಕಿಗೆ ಬರುತ್ತದೆ. ಹೆಸರುಗಳು ಬದಲಾಗಿವೆ, ಧರ್ಮವೂ ಬದಲಾಗಿದೆ. ಹಾಗಾಗಿ ಸೌಲಭ್ಯಗಳು ಸಿಗುತ್ತಿಲ್ಲ. ಮತಾಂತರ ಯಾಕಾದರು ಎಂದು ಕೇಳಿದರೂ ಉತ್ತರವಿಲ್ಲ. ಮೂಲಭೂತ ಸೌಲಭ್ಯ ಬೇಕು ಎಂದು ಕೆಲವರು ಮತಾಂತರವಾದರು, ಮನೆಯ ಮುಂದೆ ಶಿಲುಬೆ ಹಾಕಿಕೊಂಡರು. ಒಳ್ಳೆಯದಾಗುತ್ತದೆ ಎಂದು ಅಂದುಕೊಂಡರು. ಈಗ ಮತಾಂತರ ಮಾಡಿಸಿಕೊಂಡವರೂ ಇಲ್ಲ, ಸಾಮಾಜಿಕ ಮುಖಂಡರೂ ಇಲ್ಲ, ರಾಜಕೀಯ ಮುಖಂಡರೂ ಇಲ್ಲ.
ಮತಾಂತರವಾದ ಕುಟುಂಬದ ಸ್ಥಿತಿ

ಸೌಲಭ್ಯಕ್ಕಾಗಿ , ಮನೆ ನಿರ್ಮಾಣಕ್ಕಾಗಿ  ಕಚೇರಿಗಳಿಗೆ ಅಲೆದೂ ಅಲೆದೂ ಈಗ ಕಚೇರಿ ಎಂದಾಗಲೇ ಇವರಲ್ಲಿ ಕೆಲವರಿಗೆ  ಅಲರ್ಜಿ ಆಗಿದೆ. ನಮಗೇನು ಸಿಗಲ್ಲ ಎಂಬ ಭಾವನೆ ಇದೆ. ರಾಜಕೀಯ ಮುಖಂಡರೂ ಚುನಾವಣೆಯ ವೇಳೆಗೆ ಬರುತ್ತಾರೆ ಮತ್ತೆ ಈ ಕಡೆ ಬರಲ್ಲ ಎನ್ನುತ್ತಾರೆ.

ಮತಾಂತರವಾಗದ ಕುಟುಂಬದ ಸ್ಥಿತಿ

ಆದರೆ ರಾಜಕೀಯ ಮುಖಂಡರು ಹೇಳುತ್ತಾರೆ, ಚುನಾವಣೆ ನಂತರ ಮನೆ ನಿರ್ಮಾಣ ಸೇರಿದಂತೆ ಮೂಲಭೂತ ಸೌಲಭ್ಯಕ್ಕಾಗಿ ಅವರನ್ನು ಕರೆದುಕೊಂಡು ಹೋದರೂ ಮತ್ತೆ ಬರಲ್ಲ, ಹೀಗಾಗಿ ಸೌಲಭ್ಯ ನೀಡುವುದಾದರೂ ಹೇಗೆ ಎಂದು ಹೇಳುತ್ತಾರೆ. ಮತಾಂತರ ಆಗಿರುವುದು  ಒಂದು ಭಾಗವಾದರೆ, ಇನ್ನೂ ಮತಾಂತರ ಆಗದೇ ಇರುವವರಿಗೂ ಸೌಲಭ್ಯಗಳು ದೊರೆತಿಲ್ಲ, ಈಗಲೂ ದುಸ್ಥಿತಿಯಲ್ಲಿರುವ ಮನೆಯಲ್ಲಿ  ಬದುಕುತ್ತಿದ್ದಾರೆ.

Advertisement

ಸದ್ಯ ಮತಾಂತರ ಆಗಿರಬಹುದು , ಕೆಲವರು ಹೆಸರುಗಳು ಬದಲಾಗಿರಬಹುದು , ಧರ್ಮ ಹಾಗೂ ಹೆಸರಿನ ದಾಖಲೆಗಳಲ್ಲಿ  ಲೋಪ ಇರಬಹುದು, ಅದೇನೇ ಇದ್ದರೂ ಮಾನವೀಯತೆಯಿಂದ ಮೇಲಾದ್ದು ಯಾವುದೂ ಇಲ್ಲ. ಈಗ ಸರಕಾರಗಳು, ಇಲಾಖೆಗಳು, ರಾಜಕೀಯ ಮುಖಂಡರು ಮಾನವೀಯತೆಯ ಆಧಾರದಲ್ಲಿಯೇ  ಇಲ್ಲಿನ ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ಕೆಲಸ ಆಗಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

10 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

10 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

10 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

10 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

10 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

11 hours ago