Advertisement
MIRROR FOCUS

ಮತಾಂತರದ ಕರಾಳ ಮುಖ | ಇವರಿಗೆ ಸೌಲಭ್ಯಗಳು ಮಾತ್ರಾ ಇನ್ನೂ ತಲುಪಿಲ್ಲ | ಈಗ ಅಡ್ಡಿಯಾಗಿರುವುದು ಧರ್ಮ….! |

Share

ವಿಡಿಯೋ ಸ್ಟೋರಿ

ಸರಕಾರಗಳು ಇವರ ಅಭಿವೃದ್ಧಿ ಯೋಜನೆಗಳನ್ನು  ಹಾಕಿಕೊಂಡಿದೆ. ಆದರೂ ಸೌಲಭ್ಯಗಳು ಇನ್ನೂ ತಲಪುತ್ತಿಲ್ಲ. ದಾಖಲೆಗಳು ಹೇಳುತ್ತವೆ ಇವರು ಕ್ರೈಸ್ತರೆಂದು…!. ಇವರು ಸುಳ್ಯ ತಾಲೂಕಿನ ಪಂಜ ಪರಿಸರದಲ್ಲಿರುವ  ಕೊರಗ ಸಮುದಾಯದ ಹಲವು ಕುಟುಂಬಗಳು ಇಂದಿಗೂ ಮೂಲಭೂತ ಸೌಲಭ್ಯದ ಕೊರತೆಯಿಂದ ಬಳಲುತ್ತಿವೆ. ಮಾನವೀಯ ನೆಲೆಯಲ್ಲಿ  ಇವರಿಗೆ ಸೌಲಭ್ಯಗಳು ಈಗ ತಲುಪಬೇಕಿದೆ.

Advertisement
ಸುಳ್ಯ ತಾಲೂಕಿನ ಪಂಜದಲ್ಲಿ  ಕೊರಗ ಸಮುದಾಯದ ಹಲವು ಮನೆಗಳು ಇವೆ. ಸರಕಾರ ಎಲ್ಲಾ ವ್ಯವಸ್ಥೆ ಕಡೆಗೂ ಗಮನಕೊಟ್ಟರೂ ಈಗಲೂ ಮೂಲಭೂತ ಸಮಸ್ಯೆಗಳ ಕೊರತೆಯಿಂದ ಈ ಕುಟುಂಬಗಳು ಅನೇಕ ವರ್ಷಗಳಿಂದ ಬಳಲುತ್ತಿವೆ. ಈಗ ಯಾವುದೇ ಕಚೇರಿಗೆ ಈ ಕೊರಗ ಸಮುದಾಯದ ಕುಟುಂಬಗಳು ಸೌಲಭ್ಯಕ್ಕೆ ಹೋದಾಗ ದಾಖಲೆಗಳಲ್ಲಿ ಮತಾಂತರವಾದ ಬಗ್ಗೆ ಬೆಳಕಿಗೆ ಬರುತ್ತದೆ. ಹೆಸರುಗಳು ಬದಲಾಗಿವೆ, ಧರ್ಮವೂ ಬದಲಾಗಿದೆ. ಹಾಗಾಗಿ ಸೌಲಭ್ಯಗಳು ಸಿಗುತ್ತಿಲ್ಲ. ಮತಾಂತರ ಯಾಕಾದರು ಎಂದು ಕೇಳಿದರೂ ಉತ್ತರವಿಲ್ಲ. ಮೂಲಭೂತ ಸೌಲಭ್ಯ ಬೇಕು ಎಂದು ಕೆಲವರು ಮತಾಂತರವಾದರು, ಮನೆಯ ಮುಂದೆ ಶಿಲುಬೆ ಹಾಕಿಕೊಂಡರು. ಒಳ್ಳೆಯದಾಗುತ್ತದೆ ಎಂದು ಅಂದುಕೊಂಡರು. ಈಗ ಮತಾಂತರ ಮಾಡಿಸಿಕೊಂಡವರೂ ಇಲ್ಲ, ಸಾಮಾಜಿಕ ಮುಖಂಡರೂ ಇಲ್ಲ, ರಾಜಕೀಯ ಮುಖಂಡರೂ ಇಲ್ಲ.
ಮತಾಂತರವಾದ ಕುಟುಂಬದ ಸ್ಥಿತಿ

ಸೌಲಭ್ಯಕ್ಕಾಗಿ , ಮನೆ ನಿರ್ಮಾಣಕ್ಕಾಗಿ  ಕಚೇರಿಗಳಿಗೆ ಅಲೆದೂ ಅಲೆದೂ ಈಗ ಕಚೇರಿ ಎಂದಾಗಲೇ ಇವರಲ್ಲಿ ಕೆಲವರಿಗೆ  ಅಲರ್ಜಿ ಆಗಿದೆ. ನಮಗೇನು ಸಿಗಲ್ಲ ಎಂಬ ಭಾವನೆ ಇದೆ. ರಾಜಕೀಯ ಮುಖಂಡರೂ ಚುನಾವಣೆಯ ವೇಳೆಗೆ ಬರುತ್ತಾರೆ ಮತ್ತೆ ಈ ಕಡೆ ಬರಲ್ಲ ಎನ್ನುತ್ತಾರೆ.

Advertisement
ಮತಾಂತರವಾಗದ ಕುಟುಂಬದ ಸ್ಥಿತಿ

ಆದರೆ ರಾಜಕೀಯ ಮುಖಂಡರು ಹೇಳುತ್ತಾರೆ, ಚುನಾವಣೆ ನಂತರ ಮನೆ ನಿರ್ಮಾಣ ಸೇರಿದಂತೆ ಮೂಲಭೂತ ಸೌಲಭ್ಯಕ್ಕಾಗಿ ಅವರನ್ನು ಕರೆದುಕೊಂಡು ಹೋದರೂ ಮತ್ತೆ ಬರಲ್ಲ, ಹೀಗಾಗಿ ಸೌಲಭ್ಯ ನೀಡುವುದಾದರೂ ಹೇಗೆ ಎಂದು ಹೇಳುತ್ತಾರೆ. ಮತಾಂತರ ಆಗಿರುವುದು  ಒಂದು ಭಾಗವಾದರೆ, ಇನ್ನೂ ಮತಾಂತರ ಆಗದೇ ಇರುವವರಿಗೂ ಸೌಲಭ್ಯಗಳು ದೊರೆತಿಲ್ಲ, ಈಗಲೂ ದುಸ್ಥಿತಿಯಲ್ಲಿರುವ ಮನೆಯಲ್ಲಿ  ಬದುಕುತ್ತಿದ್ದಾರೆ.

Advertisement

ಸದ್ಯ ಮತಾಂತರ ಆಗಿರಬಹುದು , ಕೆಲವರು ಹೆಸರುಗಳು ಬದಲಾಗಿರಬಹುದು , ಧರ್ಮ ಹಾಗೂ ಹೆಸರಿನ ದಾಖಲೆಗಳಲ್ಲಿ  ಲೋಪ ಇರಬಹುದು, ಅದೇನೇ ಇದ್ದರೂ ಮಾನವೀಯತೆಯಿಂದ ಮೇಲಾದ್ದು ಯಾವುದೂ ಇಲ್ಲ. ಈಗ ಸರಕಾರಗಳು, ಇಲಾಖೆಗಳು, ರಾಜಕೀಯ ಮುಖಂಡರು ಮಾನವೀಯತೆಯ ಆಧಾರದಲ್ಲಿಯೇ  ಇಲ್ಲಿನ ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ಕೆಲಸ ಆಗಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

22 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago