Advertisement
MIRROR FOCUS

ಮತಾಂತರದ ಕರಾಳ ಮುಖ | ಇವರಿಗೆ ಸೌಲಭ್ಯಗಳು ಮಾತ್ರಾ ಇನ್ನೂ ತಲುಪಿಲ್ಲ | ಈಗ ಅಡ್ಡಿಯಾಗಿರುವುದು ಧರ್ಮ….! |

Share

ವಿಡಿಯೋ ಸ್ಟೋರಿ

ಸರಕಾರಗಳು ಇವರ ಅಭಿವೃದ್ಧಿ ಯೋಜನೆಗಳನ್ನು  ಹಾಕಿಕೊಂಡಿದೆ. ಆದರೂ ಸೌಲಭ್ಯಗಳು ಇನ್ನೂ ತಲಪುತ್ತಿಲ್ಲ. ದಾಖಲೆಗಳು ಹೇಳುತ್ತವೆ ಇವರು ಕ್ರೈಸ್ತರೆಂದು…!. ಇವರು ಸುಳ್ಯ ತಾಲೂಕಿನ ಪಂಜ ಪರಿಸರದಲ್ಲಿರುವ  ಕೊರಗ ಸಮುದಾಯದ ಹಲವು ಕುಟುಂಬಗಳು ಇಂದಿಗೂ ಮೂಲಭೂತ ಸೌಲಭ್ಯದ ಕೊರತೆಯಿಂದ ಬಳಲುತ್ತಿವೆ. ಮಾನವೀಯ ನೆಲೆಯಲ್ಲಿ  ಇವರಿಗೆ ಸೌಲಭ್ಯಗಳು ಈಗ ತಲುಪಬೇಕಿದೆ.

ಸುಳ್ಯ ತಾಲೂಕಿನ ಪಂಜದಲ್ಲಿ  ಕೊರಗ ಸಮುದಾಯದ ಹಲವು ಮನೆಗಳು ಇವೆ. ಸರಕಾರ ಎಲ್ಲಾ ವ್ಯವಸ್ಥೆ ಕಡೆಗೂ ಗಮನಕೊಟ್ಟರೂ ಈಗಲೂ ಮೂಲಭೂತ ಸಮಸ್ಯೆಗಳ ಕೊರತೆಯಿಂದ ಈ ಕುಟುಂಬಗಳು ಅನೇಕ ವರ್ಷಗಳಿಂದ ಬಳಲುತ್ತಿವೆ. ಈಗ ಯಾವುದೇ ಕಚೇರಿಗೆ ಈ ಕೊರಗ ಸಮುದಾಯದ ಕುಟುಂಬಗಳು ಸೌಲಭ್ಯಕ್ಕೆ ಹೋದಾಗ ದಾಖಲೆಗಳಲ್ಲಿ ಮತಾಂತರವಾದ ಬಗ್ಗೆ ಬೆಳಕಿಗೆ ಬರುತ್ತದೆ. ಹೆಸರುಗಳು ಬದಲಾಗಿವೆ, ಧರ್ಮವೂ ಬದಲಾಗಿದೆ. ಹಾಗಾಗಿ ಸೌಲಭ್ಯಗಳು ಸಿಗುತ್ತಿಲ್ಲ. ಮತಾಂತರ ಯಾಕಾದರು ಎಂದು ಕೇಳಿದರೂ ಉತ್ತರವಿಲ್ಲ. ಮೂಲಭೂತ ಸೌಲಭ್ಯ ಬೇಕು ಎಂದು ಕೆಲವರು ಮತಾಂತರವಾದರು, ಮನೆಯ ಮುಂದೆ ಶಿಲುಬೆ ಹಾಕಿಕೊಂಡರು. ಒಳ್ಳೆಯದಾಗುತ್ತದೆ ಎಂದು ಅಂದುಕೊಂಡರು. ಈಗ ಮತಾಂತರ ಮಾಡಿಸಿಕೊಂಡವರೂ ಇಲ್ಲ, ಸಾಮಾಜಿಕ ಮುಖಂಡರೂ ಇಲ್ಲ, ರಾಜಕೀಯ ಮುಖಂಡರೂ ಇಲ್ಲ.
ಮತಾಂತರವಾದ ಕುಟುಂಬದ ಸ್ಥಿತಿ

ಸೌಲಭ್ಯಕ್ಕಾಗಿ , ಮನೆ ನಿರ್ಮಾಣಕ್ಕಾಗಿ  ಕಚೇರಿಗಳಿಗೆ ಅಲೆದೂ ಅಲೆದೂ ಈಗ ಕಚೇರಿ ಎಂದಾಗಲೇ ಇವರಲ್ಲಿ ಕೆಲವರಿಗೆ  ಅಲರ್ಜಿ ಆಗಿದೆ. ನಮಗೇನು ಸಿಗಲ್ಲ ಎಂಬ ಭಾವನೆ ಇದೆ. ರಾಜಕೀಯ ಮುಖಂಡರೂ ಚುನಾವಣೆಯ ವೇಳೆಗೆ ಬರುತ್ತಾರೆ ಮತ್ತೆ ಈ ಕಡೆ ಬರಲ್ಲ ಎನ್ನುತ್ತಾರೆ.

ಮತಾಂತರವಾಗದ ಕುಟುಂಬದ ಸ್ಥಿತಿ

ಆದರೆ ರಾಜಕೀಯ ಮುಖಂಡರು ಹೇಳುತ್ತಾರೆ, ಚುನಾವಣೆ ನಂತರ ಮನೆ ನಿರ್ಮಾಣ ಸೇರಿದಂತೆ ಮೂಲಭೂತ ಸೌಲಭ್ಯಕ್ಕಾಗಿ ಅವರನ್ನು ಕರೆದುಕೊಂಡು ಹೋದರೂ ಮತ್ತೆ ಬರಲ್ಲ, ಹೀಗಾಗಿ ಸೌಲಭ್ಯ ನೀಡುವುದಾದರೂ ಹೇಗೆ ಎಂದು ಹೇಳುತ್ತಾರೆ. ಮತಾಂತರ ಆಗಿರುವುದು  ಒಂದು ಭಾಗವಾದರೆ, ಇನ್ನೂ ಮತಾಂತರ ಆಗದೇ ಇರುವವರಿಗೂ ಸೌಲಭ್ಯಗಳು ದೊರೆತಿಲ್ಲ, ಈಗಲೂ ದುಸ್ಥಿತಿಯಲ್ಲಿರುವ ಮನೆಯಲ್ಲಿ  ಬದುಕುತ್ತಿದ್ದಾರೆ.

ಸದ್ಯ ಮತಾಂತರ ಆಗಿರಬಹುದು , ಕೆಲವರು ಹೆಸರುಗಳು ಬದಲಾಗಿರಬಹುದು , ಧರ್ಮ ಹಾಗೂ ಹೆಸರಿನ ದಾಖಲೆಗಳಲ್ಲಿ  ಲೋಪ ಇರಬಹುದು, ಅದೇನೇ ಇದ್ದರೂ ಮಾನವೀಯತೆಯಿಂದ ಮೇಲಾದ್ದು ಯಾವುದೂ ಇಲ್ಲ. ಈಗ ಸರಕಾರಗಳು, ಇಲಾಖೆಗಳು, ರಾಜಕೀಯ ಮುಖಂಡರು ಮಾನವೀಯತೆಯ ಆಧಾರದಲ್ಲಿಯೇ  ಇಲ್ಲಿನ ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ಕೆಲಸ ಆಗಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

5 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

12 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

12 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

22 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

23 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago