Advertisement
MIRROR FOCUS

ಮತಾಂತರದ ಕರಾಳ ಮುಖ | ಇವರಿಗೆ ಸೌಲಭ್ಯಗಳು ಮಾತ್ರಾ ಇನ್ನೂ ತಲುಪಿಲ್ಲ | ಈಗ ಅಡ್ಡಿಯಾಗಿರುವುದು ಧರ್ಮ….! |

Share

ವಿಡಿಯೋ ಸ್ಟೋರಿ

ಸರಕಾರಗಳು ಇವರ ಅಭಿವೃದ್ಧಿ ಯೋಜನೆಗಳನ್ನು  ಹಾಕಿಕೊಂಡಿದೆ. ಆದರೂ ಸೌಲಭ್ಯಗಳು ಇನ್ನೂ ತಲಪುತ್ತಿಲ್ಲ. ದಾಖಲೆಗಳು ಹೇಳುತ್ತವೆ ಇವರು ಕ್ರೈಸ್ತರೆಂದು…!. ಇವರು ಸುಳ್ಯ ತಾಲೂಕಿನ ಪಂಜ ಪರಿಸರದಲ್ಲಿರುವ  ಕೊರಗ ಸಮುದಾಯದ ಹಲವು ಕುಟುಂಬಗಳು ಇಂದಿಗೂ ಮೂಲಭೂತ ಸೌಲಭ್ಯದ ಕೊರತೆಯಿಂದ ಬಳಲುತ್ತಿವೆ. ಮಾನವೀಯ ನೆಲೆಯಲ್ಲಿ  ಇವರಿಗೆ ಸೌಲಭ್ಯಗಳು ಈಗ ತಲುಪಬೇಕಿದೆ.

ಸುಳ್ಯ ತಾಲೂಕಿನ ಪಂಜದಲ್ಲಿ  ಕೊರಗ ಸಮುದಾಯದ ಹಲವು ಮನೆಗಳು ಇವೆ. ಸರಕಾರ ಎಲ್ಲಾ ವ್ಯವಸ್ಥೆ ಕಡೆಗೂ ಗಮನಕೊಟ್ಟರೂ ಈಗಲೂ ಮೂಲಭೂತ ಸಮಸ್ಯೆಗಳ ಕೊರತೆಯಿಂದ ಈ ಕುಟುಂಬಗಳು ಅನೇಕ ವರ್ಷಗಳಿಂದ ಬಳಲುತ್ತಿವೆ. ಈಗ ಯಾವುದೇ ಕಚೇರಿಗೆ ಈ ಕೊರಗ ಸಮುದಾಯದ ಕುಟುಂಬಗಳು ಸೌಲಭ್ಯಕ್ಕೆ ಹೋದಾಗ ದಾಖಲೆಗಳಲ್ಲಿ ಮತಾಂತರವಾದ ಬಗ್ಗೆ ಬೆಳಕಿಗೆ ಬರುತ್ತದೆ. ಹೆಸರುಗಳು ಬದಲಾಗಿವೆ, ಧರ್ಮವೂ ಬದಲಾಗಿದೆ. ಹಾಗಾಗಿ ಸೌಲಭ್ಯಗಳು ಸಿಗುತ್ತಿಲ್ಲ. ಮತಾಂತರ ಯಾಕಾದರು ಎಂದು ಕೇಳಿದರೂ ಉತ್ತರವಿಲ್ಲ. ಮೂಲಭೂತ ಸೌಲಭ್ಯ ಬೇಕು ಎಂದು ಕೆಲವರು ಮತಾಂತರವಾದರು, ಮನೆಯ ಮುಂದೆ ಶಿಲುಬೆ ಹಾಕಿಕೊಂಡರು. ಒಳ್ಳೆಯದಾಗುತ್ತದೆ ಎಂದು ಅಂದುಕೊಂಡರು. ಈಗ ಮತಾಂತರ ಮಾಡಿಸಿಕೊಂಡವರೂ ಇಲ್ಲ, ಸಾಮಾಜಿಕ ಮುಖಂಡರೂ ಇಲ್ಲ, ರಾಜಕೀಯ ಮುಖಂಡರೂ ಇಲ್ಲ.
ಮತಾಂತರವಾದ ಕುಟುಂಬದ ಸ್ಥಿತಿ

ಸೌಲಭ್ಯಕ್ಕಾಗಿ , ಮನೆ ನಿರ್ಮಾಣಕ್ಕಾಗಿ  ಕಚೇರಿಗಳಿಗೆ ಅಲೆದೂ ಅಲೆದೂ ಈಗ ಕಚೇರಿ ಎಂದಾಗಲೇ ಇವರಲ್ಲಿ ಕೆಲವರಿಗೆ  ಅಲರ್ಜಿ ಆಗಿದೆ. ನಮಗೇನು ಸಿಗಲ್ಲ ಎಂಬ ಭಾವನೆ ಇದೆ. ರಾಜಕೀಯ ಮುಖಂಡರೂ ಚುನಾವಣೆಯ ವೇಳೆಗೆ ಬರುತ್ತಾರೆ ಮತ್ತೆ ಈ ಕಡೆ ಬರಲ್ಲ ಎನ್ನುತ್ತಾರೆ.

ಮತಾಂತರವಾಗದ ಕುಟುಂಬದ ಸ್ಥಿತಿ

ಆದರೆ ರಾಜಕೀಯ ಮುಖಂಡರು ಹೇಳುತ್ತಾರೆ, ಚುನಾವಣೆ ನಂತರ ಮನೆ ನಿರ್ಮಾಣ ಸೇರಿದಂತೆ ಮೂಲಭೂತ ಸೌಲಭ್ಯಕ್ಕಾಗಿ ಅವರನ್ನು ಕರೆದುಕೊಂಡು ಹೋದರೂ ಮತ್ತೆ ಬರಲ್ಲ, ಹೀಗಾಗಿ ಸೌಲಭ್ಯ ನೀಡುವುದಾದರೂ ಹೇಗೆ ಎಂದು ಹೇಳುತ್ತಾರೆ. ಮತಾಂತರ ಆಗಿರುವುದು  ಒಂದು ಭಾಗವಾದರೆ, ಇನ್ನೂ ಮತಾಂತರ ಆಗದೇ ಇರುವವರಿಗೂ ಸೌಲಭ್ಯಗಳು ದೊರೆತಿಲ್ಲ, ಈಗಲೂ ದುಸ್ಥಿತಿಯಲ್ಲಿರುವ ಮನೆಯಲ್ಲಿ  ಬದುಕುತ್ತಿದ್ದಾರೆ.

ಸದ್ಯ ಮತಾಂತರ ಆಗಿರಬಹುದು , ಕೆಲವರು ಹೆಸರುಗಳು ಬದಲಾಗಿರಬಹುದು , ಧರ್ಮ ಹಾಗೂ ಹೆಸರಿನ ದಾಖಲೆಗಳಲ್ಲಿ  ಲೋಪ ಇರಬಹುದು, ಅದೇನೇ ಇದ್ದರೂ ಮಾನವೀಯತೆಯಿಂದ ಮೇಲಾದ್ದು ಯಾವುದೂ ಇಲ್ಲ. ಈಗ ಸರಕಾರಗಳು, ಇಲಾಖೆಗಳು, ರಾಜಕೀಯ ಮುಖಂಡರು ಮಾನವೀಯತೆಯ ಆಧಾರದಲ್ಲಿಯೇ  ಇಲ್ಲಿನ ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ಕೆಲಸ ಆಗಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

11 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

12 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

13 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

16 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago