ಬಿಗ್‌ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಗೆಲುವಿಗೆ ಕೊರಗಜ್ಜ ಪ್ರಾರ್ಥನೆಯೂ ಕಾರಣ…!

January 10, 2023
9:23 PM

ಬಿಗ್‌ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.

ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್‌ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್‌ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್‌ಬಾಸ್ ಮನೆಯಲ್ಲಿಯೂ ಕೊರಗಜ್ಜ‌ನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್‌ ಶೆಟ್ಟಿ ಹೇಳಿದರು.

ಬಿಗ್‌ಬಾಸ್​ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror