ಬಿಗ್‌ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಗೆಲುವಿಗೆ ಕೊರಗಜ್ಜ ಪ್ರಾರ್ಥನೆಯೂ ಕಾರಣ…!

January 10, 2023
9:23 PM

ಬಿಗ್‌ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.

ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್‌ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್‌ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್‌ಬಾಸ್ ಮನೆಯಲ್ಲಿಯೂ ಕೊರಗಜ್ಜ‌ನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್‌ ಶೆಟ್ಟಿ ಹೇಳಿದರು.

ಬಿಗ್‌ಬಾಸ್​ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror