ಬಿಗ್‌ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಗೆಲುವಿಗೆ ಕೊರಗಜ್ಜ ಪ್ರಾರ್ಥನೆಯೂ ಕಾರಣ…!

January 10, 2023
9:23 PM

ಬಿಗ್‌ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.

ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್‌ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್‌ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್‌ಬಾಸ್ ಮನೆಯಲ್ಲಿಯೂ ಕೊರಗಜ್ಜ‌ನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್‌ ಶೆಟ್ಟಿ ಹೇಳಿದರು.

ಬಿಗ್‌ಬಾಸ್​ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror