ಬಿಗ್ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.
ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್ಬಾಸ್ ಮನೆಯಲ್ಲಿಯೂ ಕೊರಗಜ್ಜನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್ ಶೆಟ್ಟಿ ಹೇಳಿದರು.
ಬಿಗ್ಬಾಸ್ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.
ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ…
ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ…