ಬಿಗ್ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.
ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್ಬಾಸ್ ಮನೆಯಲ್ಲಿಯೂ ಕೊರಗಜ್ಜನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್ ಶೆಟ್ಟಿ ಹೇಳಿದರು.
ಬಿಗ್ಬಾಸ್ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…