ಬಿಗ್ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.
ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್ಬಾಸ್ ಮನೆಯಲ್ಲಿಯೂ ಕೊರಗಜ್ಜನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್ ಶೆಟ್ಟಿ ಹೇಳಿದರು.
ಬಿಗ್ಬಾಸ್ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…