ಬಿಗ್ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.
ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್ಬಾಸ್ ಮನೆಯಲ್ಲಿಯೂ ಕೊರಗಜ್ಜನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್ ಶೆಟ್ಟಿ ಹೇಳಿದರು.
ಬಿಗ್ಬಾಸ್ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…