ಬಿಗ್ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.
ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್ಬಾಸ್ ಮನೆಯಲ್ಲಿಯೂ ಕೊರಗಜ್ಜನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್ ಶೆಟ್ಟಿ ಹೇಳಿದರು.
ಬಿಗ್ಬಾಸ್ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…