ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಮೂಡಿದ ಬೇರು | ನಂಬಿಕೆ ಇಮ್ಮಡಿಗೊಳಿಸಿದ ದೈವ |

September 20, 2022
8:38 AM

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆ ಎಂಬಲ್ಲಿ ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಹಾಗೂ ಕುತೂಹಲದ ಜೊತೆಗೆ ದೈವದ ಮೇಲಿನ ನಂಬಿಕೆ ಇಮ್ಮಡಿಯಾಗಿದೆ.

Advertisement
Advertisement
Advertisement
Advertisement

ಸುಳ್ಯದ ಗುತ್ತಿಗಾರು ಬಳಿಯ ಮೊಗ್ರದ ಮಾತ್ರಮಜಲು ಎಂಬಲ್ಲಿ ಶೀನಪ್ಪ ಎಂಬವರ ಮನೆಯ ವಠಾರದಲ್ಲಿ ಕೊರಗಜ್ಜ ದೈವದ ಕಟ್ಟೆ ಇದೆ. ಇಲ್ಲಿ ಪ್ರತೀ  ತಿಂಗಳು ಸಂಕ್ರಮಣದ ದಿನ ಆರಾಧನೆಯಾಗುತ್ತದೆ. ಕಳೆದ ತಿಂಗಳು ಮಗುವಿಗೆ ಅನಾರೋಗ್ಯ ಇದ್ದಾಗ ಸಮೀಪದವರು ಕೊರಗಜ್ಜ ದೈವಕ್ಕೆ ಹರಿಕೆ ಹೇಳಿದ್ದರು. ಈ ಸಂದರ್ಭ ಕೊರಗಜ್ಜನಿಗೆ ಪ್ರಿಯವಾದ ವೀಳ್ಯದೆಲೆ , ಅಡಿಕೆಯನ್ನು ಕಟ್ಟೆಯ ಮೇಲೆ ಇರಿಸಿ ಪ್ರಾರ್ಥನೆ ಮಾಡಿದ್ದರು. ಅದಾಗಿ ಕೆಲವು ದಿನಗಳವರೆಗೂ ಹಸಿರಾಗಿಯೇ ಇದ್ದ ವೀಳ್ಯದೆಲೆ ನಂತರ ಬೇರು ಬರಲು ಆರಂಭಿಸಿತು. ತಕ್ಷಣವೇ ಶೀನಪ್ಪ ಅವರು ದೈವಜ್ಞರ ಮೂಲಕವೂ ತಿಳಿದಾಗ ಸತ್ಯದ ಅರಿವಾಯಿತು. ಮಗು ಆರೋಗ್ಯವಾಗಿರುವುದೂ ತಿಳಿಯಿತು. ಹೀಗಾಗಿ ಅದೇ ವೀಳ್ಯದೆಲೆಯನ್ನು ಈಗ ಹೂಕುಂಡದಲ್ಲಿ ಇರಿಸಿದ್ದಾರೆ. ಈಗಲೂ ವೀಳ್ಯದೆಲೆ ಹಸಿರಾಗಿಯೇ ಇದೆ. ಕಳೆದ ತಿಂಗಳು ಈ ವೀಳ್ಯದೆಲೆಯನ್ನು ಕಟ್ಟೆಯ ಮೇಲೆ ಇರಿಸಲಾಗಿತ್ತು ಎಂದು ಹೇಳುತ್ತಾರೆ ಶೀನಪ್ಪ.

Advertisement

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವ. ನಂಬಿದವರಿಗೆ ಇಂಬು ನೀಡುವ, ಮಾನಸಿಕ ಧೈರ್ಯ ನೀಡುವ ದೈವವಾಗಿ ಆರಾಧನೆಯಾಗುತ್ತಿದೆ. ಅಲ್ಲಲ್ಲಿ ಕೊರಗಜ್ಜನ ಕಟ್ಟೆಗಳು ಇವೆ, ಆರಾಧನೆಗಳು ನಡೆಯುತ್ತವೆ. ಪ್ರತೀ ಕಡೆಯಲ್ಲೂ ಇಂತಹದ್ದೇ ಒಂದೊಂದು ಪವಾಡಗಳು ನಡೆಯುತ್ತವೆ ಎಂದು ಹೇಳುತ್ತಾರೆ ದೈವ ನರ್ತಕ ವಸಂತ ಮೊಗ್ರ.

Advertisement

Advertisement

ವೀಳ್ಯದೆಲೆಯು ಸಾಮಾನ್ಯವಾಗಿ ವಾರದಲ್ಲಿ ಬಾಡಿ ಹೋಗುತ್ತದೆ. ಅಂತಹದ್ದರಲ್ಲಿ ಕೊರಗಜ್ಜನ ಕಟ್ಟೆಯಲ್ಲಿ ಇರಿಸಿರುವ ಈ ವೀಳ್ಯದೆಲೆಯು ಹಸಿರಾಗಿಯೇ ಇದ್ದು ಈಗ ಬೇರು ಮೂಡಿರುವುದು  ಭಕ್ತರಿಗೆ ನಂಬಿಕೆಯನ್ನು ಇಮ್ಮಡಿಗೊಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror