ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಮೂಡಿದ ಬೇರು | ನಂಬಿಕೆ ಇಮ್ಮಡಿಗೊಳಿಸಿದ ದೈವ |

September 20, 2022
8:38 AM

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆ ಎಂಬಲ್ಲಿ ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಹಾಗೂ ಕುತೂಹಲದ ಜೊತೆಗೆ ದೈವದ ಮೇಲಿನ ನಂಬಿಕೆ ಇಮ್ಮಡಿಯಾಗಿದೆ.

ಸುಳ್ಯದ ಗುತ್ತಿಗಾರು ಬಳಿಯ ಮೊಗ್ರದ ಮಾತ್ರಮಜಲು ಎಂಬಲ್ಲಿ ಶೀನಪ್ಪ ಎಂಬವರ ಮನೆಯ ವಠಾರದಲ್ಲಿ ಕೊರಗಜ್ಜ ದೈವದ ಕಟ್ಟೆ ಇದೆ. ಇಲ್ಲಿ ಪ್ರತೀ  ತಿಂಗಳು ಸಂಕ್ರಮಣದ ದಿನ ಆರಾಧನೆಯಾಗುತ್ತದೆ. ಕಳೆದ ತಿಂಗಳು ಮಗುವಿಗೆ ಅನಾರೋಗ್ಯ ಇದ್ದಾಗ ಸಮೀಪದವರು ಕೊರಗಜ್ಜ ದೈವಕ್ಕೆ ಹರಿಕೆ ಹೇಳಿದ್ದರು. ಈ ಸಂದರ್ಭ ಕೊರಗಜ್ಜನಿಗೆ ಪ್ರಿಯವಾದ ವೀಳ್ಯದೆಲೆ , ಅಡಿಕೆಯನ್ನು ಕಟ್ಟೆಯ ಮೇಲೆ ಇರಿಸಿ ಪ್ರಾರ್ಥನೆ ಮಾಡಿದ್ದರು. ಅದಾಗಿ ಕೆಲವು ದಿನಗಳವರೆಗೂ ಹಸಿರಾಗಿಯೇ ಇದ್ದ ವೀಳ್ಯದೆಲೆ ನಂತರ ಬೇರು ಬರಲು ಆರಂಭಿಸಿತು. ತಕ್ಷಣವೇ ಶೀನಪ್ಪ ಅವರು ದೈವಜ್ಞರ ಮೂಲಕವೂ ತಿಳಿದಾಗ ಸತ್ಯದ ಅರಿವಾಯಿತು. ಮಗು ಆರೋಗ್ಯವಾಗಿರುವುದೂ ತಿಳಿಯಿತು. ಹೀಗಾಗಿ ಅದೇ ವೀಳ್ಯದೆಲೆಯನ್ನು ಈಗ ಹೂಕುಂಡದಲ್ಲಿ ಇರಿಸಿದ್ದಾರೆ. ಈಗಲೂ ವೀಳ್ಯದೆಲೆ ಹಸಿರಾಗಿಯೇ ಇದೆ. ಕಳೆದ ತಿಂಗಳು ಈ ವೀಳ್ಯದೆಲೆಯನ್ನು ಕಟ್ಟೆಯ ಮೇಲೆ ಇರಿಸಲಾಗಿತ್ತು ಎಂದು ಹೇಳುತ್ತಾರೆ ಶೀನಪ್ಪ.

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವ. ನಂಬಿದವರಿಗೆ ಇಂಬು ನೀಡುವ, ಮಾನಸಿಕ ಧೈರ್ಯ ನೀಡುವ ದೈವವಾಗಿ ಆರಾಧನೆಯಾಗುತ್ತಿದೆ. ಅಲ್ಲಲ್ಲಿ ಕೊರಗಜ್ಜನ ಕಟ್ಟೆಗಳು ಇವೆ, ಆರಾಧನೆಗಳು ನಡೆಯುತ್ತವೆ. ಪ್ರತೀ ಕಡೆಯಲ್ಲೂ ಇಂತಹದ್ದೇ ಒಂದೊಂದು ಪವಾಡಗಳು ನಡೆಯುತ್ತವೆ ಎಂದು ಹೇಳುತ್ತಾರೆ ದೈವ ನರ್ತಕ ವಸಂತ ಮೊಗ್ರ.

ವೀಳ್ಯದೆಲೆಯು ಸಾಮಾನ್ಯವಾಗಿ ವಾರದಲ್ಲಿ ಬಾಡಿ ಹೋಗುತ್ತದೆ. ಅಂತಹದ್ದರಲ್ಲಿ ಕೊರಗಜ್ಜನ ಕಟ್ಟೆಯಲ್ಲಿ ಇರಿಸಿರುವ ಈ ವೀಳ್ಯದೆಲೆಯು ಹಸಿರಾಗಿಯೇ ಇದ್ದು ಈಗ ಬೇರು ಮೂಡಿರುವುದು  ಭಕ್ತರಿಗೆ ನಂಬಿಕೆಯನ್ನು ಇಮ್ಮಡಿಗೊಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror