Advertisement
Exclusive - Mirror Hunt

ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಮೂಡಿದ ಬೇರು | ನಂಬಿಕೆ ಇಮ್ಮಡಿಗೊಳಿಸಿದ ದೈವ |

Share

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆ ಎಂಬಲ್ಲಿ ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಹಾಗೂ ಕುತೂಹಲದ ಜೊತೆಗೆ ದೈವದ ಮೇಲಿನ ನಂಬಿಕೆ ಇಮ್ಮಡಿಯಾಗಿದೆ.

Advertisement
Advertisement

ಸುಳ್ಯದ ಗುತ್ತಿಗಾರು ಬಳಿಯ ಮೊಗ್ರದ ಮಾತ್ರಮಜಲು ಎಂಬಲ್ಲಿ ಶೀನಪ್ಪ ಎಂಬವರ ಮನೆಯ ವಠಾರದಲ್ಲಿ ಕೊರಗಜ್ಜ ದೈವದ ಕಟ್ಟೆ ಇದೆ. ಇಲ್ಲಿ ಪ್ರತೀ  ತಿಂಗಳು ಸಂಕ್ರಮಣದ ದಿನ ಆರಾಧನೆಯಾಗುತ್ತದೆ. ಕಳೆದ ತಿಂಗಳು ಮಗುವಿಗೆ ಅನಾರೋಗ್ಯ ಇದ್ದಾಗ ಸಮೀಪದವರು ಕೊರಗಜ್ಜ ದೈವಕ್ಕೆ ಹರಿಕೆ ಹೇಳಿದ್ದರು. ಈ ಸಂದರ್ಭ ಕೊರಗಜ್ಜನಿಗೆ ಪ್ರಿಯವಾದ ವೀಳ್ಯದೆಲೆ , ಅಡಿಕೆಯನ್ನು ಕಟ್ಟೆಯ ಮೇಲೆ ಇರಿಸಿ ಪ್ರಾರ್ಥನೆ ಮಾಡಿದ್ದರು. ಅದಾಗಿ ಕೆಲವು ದಿನಗಳವರೆಗೂ ಹಸಿರಾಗಿಯೇ ಇದ್ದ ವೀಳ್ಯದೆಲೆ ನಂತರ ಬೇರು ಬರಲು ಆರಂಭಿಸಿತು. ತಕ್ಷಣವೇ ಶೀನಪ್ಪ ಅವರು ದೈವಜ್ಞರ ಮೂಲಕವೂ ತಿಳಿದಾಗ ಸತ್ಯದ ಅರಿವಾಯಿತು. ಮಗು ಆರೋಗ್ಯವಾಗಿರುವುದೂ ತಿಳಿಯಿತು. ಹೀಗಾಗಿ ಅದೇ ವೀಳ್ಯದೆಲೆಯನ್ನು ಈಗ ಹೂಕುಂಡದಲ್ಲಿ ಇರಿಸಿದ್ದಾರೆ. ಈಗಲೂ ವೀಳ್ಯದೆಲೆ ಹಸಿರಾಗಿಯೇ ಇದೆ. ಕಳೆದ ತಿಂಗಳು ಈ ವೀಳ್ಯದೆಲೆಯನ್ನು ಕಟ್ಟೆಯ ಮೇಲೆ ಇರಿಸಲಾಗಿತ್ತು ಎಂದು ಹೇಳುತ್ತಾರೆ ಶೀನಪ್ಪ.

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವ. ನಂಬಿದವರಿಗೆ ಇಂಬು ನೀಡುವ, ಮಾನಸಿಕ ಧೈರ್ಯ ನೀಡುವ ದೈವವಾಗಿ ಆರಾಧನೆಯಾಗುತ್ತಿದೆ. ಅಲ್ಲಲ್ಲಿ ಕೊರಗಜ್ಜನ ಕಟ್ಟೆಗಳು ಇವೆ, ಆರಾಧನೆಗಳು ನಡೆಯುತ್ತವೆ. ಪ್ರತೀ ಕಡೆಯಲ್ಲೂ ಇಂತಹದ್ದೇ ಒಂದೊಂದು ಪವಾಡಗಳು ನಡೆಯುತ್ತವೆ ಎಂದು ಹೇಳುತ್ತಾರೆ ದೈವ ನರ್ತಕ ವಸಂತ ಮೊಗ್ರ.

ವೀಳ್ಯದೆಲೆಯು ಸಾಮಾನ್ಯವಾಗಿ ವಾರದಲ್ಲಿ ಬಾಡಿ ಹೋಗುತ್ತದೆ. ಅಂತಹದ್ದರಲ್ಲಿ ಕೊರಗಜ್ಜನ ಕಟ್ಟೆಯಲ್ಲಿ ಇರಿಸಿರುವ ಈ ವೀಳ್ಯದೆಲೆಯು ಹಸಿರಾಗಿಯೇ ಇದ್ದು ಈಗ ಬೇರು ಮೂಡಿರುವುದು  ಭಕ್ತರಿಗೆ ನಂಬಿಕೆಯನ್ನು ಇಮ್ಮಡಿಗೊಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

23 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 day ago