Advertisement
Exclusive - Mirror Hunt

ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಮೂಡಿದ ಬೇರು | ನಂಬಿಕೆ ಇಮ್ಮಡಿಗೊಳಿಸಿದ ದೈವ |

Share

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆ ಎಂಬಲ್ಲಿ ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಹಾಗೂ ಕುತೂಹಲದ ಜೊತೆಗೆ ದೈವದ ಮೇಲಿನ ನಂಬಿಕೆ ಇಮ್ಮಡಿಯಾಗಿದೆ.

ಸುಳ್ಯದ ಗುತ್ತಿಗಾರು ಬಳಿಯ ಮೊಗ್ರದ ಮಾತ್ರಮಜಲು ಎಂಬಲ್ಲಿ ಶೀನಪ್ಪ ಎಂಬವರ ಮನೆಯ ವಠಾರದಲ್ಲಿ ಕೊರಗಜ್ಜ ದೈವದ ಕಟ್ಟೆ ಇದೆ. ಇಲ್ಲಿ ಪ್ರತೀ  ತಿಂಗಳು ಸಂಕ್ರಮಣದ ದಿನ ಆರಾಧನೆಯಾಗುತ್ತದೆ. ಕಳೆದ ತಿಂಗಳು ಮಗುವಿಗೆ ಅನಾರೋಗ್ಯ ಇದ್ದಾಗ ಸಮೀಪದವರು ಕೊರಗಜ್ಜ ದೈವಕ್ಕೆ ಹರಿಕೆ ಹೇಳಿದ್ದರು. ಈ ಸಂದರ್ಭ ಕೊರಗಜ್ಜನಿಗೆ ಪ್ರಿಯವಾದ ವೀಳ್ಯದೆಲೆ , ಅಡಿಕೆಯನ್ನು ಕಟ್ಟೆಯ ಮೇಲೆ ಇರಿಸಿ ಪ್ರಾರ್ಥನೆ ಮಾಡಿದ್ದರು. ಅದಾಗಿ ಕೆಲವು ದಿನಗಳವರೆಗೂ ಹಸಿರಾಗಿಯೇ ಇದ್ದ ವೀಳ್ಯದೆಲೆ ನಂತರ ಬೇರು ಬರಲು ಆರಂಭಿಸಿತು. ತಕ್ಷಣವೇ ಶೀನಪ್ಪ ಅವರು ದೈವಜ್ಞರ ಮೂಲಕವೂ ತಿಳಿದಾಗ ಸತ್ಯದ ಅರಿವಾಯಿತು. ಮಗು ಆರೋಗ್ಯವಾಗಿರುವುದೂ ತಿಳಿಯಿತು. ಹೀಗಾಗಿ ಅದೇ ವೀಳ್ಯದೆಲೆಯನ್ನು ಈಗ ಹೂಕುಂಡದಲ್ಲಿ ಇರಿಸಿದ್ದಾರೆ. ಈಗಲೂ ವೀಳ್ಯದೆಲೆ ಹಸಿರಾಗಿಯೇ ಇದೆ. ಕಳೆದ ತಿಂಗಳು ಈ ವೀಳ್ಯದೆಲೆಯನ್ನು ಕಟ್ಟೆಯ ಮೇಲೆ ಇರಿಸಲಾಗಿತ್ತು ಎಂದು ಹೇಳುತ್ತಾರೆ ಶೀನಪ್ಪ.

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವ. ನಂಬಿದವರಿಗೆ ಇಂಬು ನೀಡುವ, ಮಾನಸಿಕ ಧೈರ್ಯ ನೀಡುವ ದೈವವಾಗಿ ಆರಾಧನೆಯಾಗುತ್ತಿದೆ. ಅಲ್ಲಲ್ಲಿ ಕೊರಗಜ್ಜನ ಕಟ್ಟೆಗಳು ಇವೆ, ಆರಾಧನೆಗಳು ನಡೆಯುತ್ತವೆ. ಪ್ರತೀ ಕಡೆಯಲ್ಲೂ ಇಂತಹದ್ದೇ ಒಂದೊಂದು ಪವಾಡಗಳು ನಡೆಯುತ್ತವೆ ಎಂದು ಹೇಳುತ್ತಾರೆ ದೈವ ನರ್ತಕ ವಸಂತ ಮೊಗ್ರ.

Advertisement

ವೀಳ್ಯದೆಲೆಯು ಸಾಮಾನ್ಯವಾಗಿ ವಾರದಲ್ಲಿ ಬಾಡಿ ಹೋಗುತ್ತದೆ. ಅಂತಹದ್ದರಲ್ಲಿ ಕೊರಗಜ್ಜನ ಕಟ್ಟೆಯಲ್ಲಿ ಇರಿಸಿರುವ ಈ ವೀಳ್ಯದೆಲೆಯು ಹಸಿರಾಗಿಯೇ ಇದ್ದು ಈಗ ಬೇರು ಮೂಡಿರುವುದು  ಭಕ್ತರಿಗೆ ನಂಬಿಕೆಯನ್ನು ಇಮ್ಮಡಿಗೊಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

4 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

11 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

15 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

17 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago