Advertisement
Exclusive - Mirror Hunt

ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಮೂಡಿದ ಬೇರು | ನಂಬಿಕೆ ಇಮ್ಮಡಿಗೊಳಿಸಿದ ದೈವ |

Share

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆ ಎಂಬಲ್ಲಿ ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಹಾಗೂ ಕುತೂಹಲದ ಜೊತೆಗೆ ದೈವದ ಮೇಲಿನ ನಂಬಿಕೆ ಇಮ್ಮಡಿಯಾಗಿದೆ.

ಸುಳ್ಯದ ಗುತ್ತಿಗಾರು ಬಳಿಯ ಮೊಗ್ರದ ಮಾತ್ರಮಜಲು ಎಂಬಲ್ಲಿ ಶೀನಪ್ಪ ಎಂಬವರ ಮನೆಯ ವಠಾರದಲ್ಲಿ ಕೊರಗಜ್ಜ ದೈವದ ಕಟ್ಟೆ ಇದೆ. ಇಲ್ಲಿ ಪ್ರತೀ  ತಿಂಗಳು ಸಂಕ್ರಮಣದ ದಿನ ಆರಾಧನೆಯಾಗುತ್ತದೆ. ಕಳೆದ ತಿಂಗಳು ಮಗುವಿಗೆ ಅನಾರೋಗ್ಯ ಇದ್ದಾಗ ಸಮೀಪದವರು ಕೊರಗಜ್ಜ ದೈವಕ್ಕೆ ಹರಿಕೆ ಹೇಳಿದ್ದರು. ಈ ಸಂದರ್ಭ ಕೊರಗಜ್ಜನಿಗೆ ಪ್ರಿಯವಾದ ವೀಳ್ಯದೆಲೆ , ಅಡಿಕೆಯನ್ನು ಕಟ್ಟೆಯ ಮೇಲೆ ಇರಿಸಿ ಪ್ರಾರ್ಥನೆ ಮಾಡಿದ್ದರು. ಅದಾಗಿ ಕೆಲವು ದಿನಗಳವರೆಗೂ ಹಸಿರಾಗಿಯೇ ಇದ್ದ ವೀಳ್ಯದೆಲೆ ನಂತರ ಬೇರು ಬರಲು ಆರಂಭಿಸಿತು. ತಕ್ಷಣವೇ ಶೀನಪ್ಪ ಅವರು ದೈವಜ್ಞರ ಮೂಲಕವೂ ತಿಳಿದಾಗ ಸತ್ಯದ ಅರಿವಾಯಿತು. ಮಗು ಆರೋಗ್ಯವಾಗಿರುವುದೂ ತಿಳಿಯಿತು. ಹೀಗಾಗಿ ಅದೇ ವೀಳ್ಯದೆಲೆಯನ್ನು ಈಗ ಹೂಕುಂಡದಲ್ಲಿ ಇರಿಸಿದ್ದಾರೆ. ಈಗಲೂ ವೀಳ್ಯದೆಲೆ ಹಸಿರಾಗಿಯೇ ಇದೆ. ಕಳೆದ ತಿಂಗಳು ಈ ವೀಳ್ಯದೆಲೆಯನ್ನು ಕಟ್ಟೆಯ ಮೇಲೆ ಇರಿಸಲಾಗಿತ್ತು ಎಂದು ಹೇಳುತ್ತಾರೆ ಶೀನಪ್ಪ.

ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವ. ನಂಬಿದವರಿಗೆ ಇಂಬು ನೀಡುವ, ಮಾನಸಿಕ ಧೈರ್ಯ ನೀಡುವ ದೈವವಾಗಿ ಆರಾಧನೆಯಾಗುತ್ತಿದೆ. ಅಲ್ಲಲ್ಲಿ ಕೊರಗಜ್ಜನ ಕಟ್ಟೆಗಳು ಇವೆ, ಆರಾಧನೆಗಳು ನಡೆಯುತ್ತವೆ. ಪ್ರತೀ ಕಡೆಯಲ್ಲೂ ಇಂತಹದ್ದೇ ಒಂದೊಂದು ಪವಾಡಗಳು ನಡೆಯುತ್ತವೆ ಎಂದು ಹೇಳುತ್ತಾರೆ ದೈವ ನರ್ತಕ ವಸಂತ ಮೊಗ್ರ.

ವೀಳ್ಯದೆಲೆಯು ಸಾಮಾನ್ಯವಾಗಿ ವಾರದಲ್ಲಿ ಬಾಡಿ ಹೋಗುತ್ತದೆ. ಅಂತಹದ್ದರಲ್ಲಿ ಕೊರಗಜ್ಜನ ಕಟ್ಟೆಯಲ್ಲಿ ಇರಿಸಿರುವ ಈ ವೀಳ್ಯದೆಲೆಯು ಹಸಿರಾಗಿಯೇ ಇದ್ದು ಈಗ ಬೇರು ಮೂಡಿರುವುದು  ಭಕ್ತರಿಗೆ ನಂಬಿಕೆಯನ್ನು ಇಮ್ಮಡಿಗೊಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

6 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

7 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

7 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

12 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago